ಜಿಲ್ಲೆಗಳು

ಮತ್ತೆ ಕಾಣಿಸಿಕೊಂಡ ಚಿರತೆ ಗ್ರಾಮಸ್ಥರಲ್ಲಿ ಆತಂಕ

ಹನೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕೆಬ್ಬೆಹುಂಡಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಶಾಲಾ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮಾಸುತ್ತಿರುವಾಗಲೇ ಕ್ಷೇತ್ರ ವ್ಯಾಪ್ತಿಯ ಕರಿಯನಪುರ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿರುವುದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.

ಕಳೆದ ಮಂಗಳವಾರ ಕರಿಯನ ಪುರದ ರಾಚಯ್ಯ ಎಂಬುವರ ಹಸುವನ್ನು ಚಿರತೆ ಬೇಟೆಯಾಡಿ ತಿಂದು ಹೋಗಿದ್ದ ಘಟನೆಮಾಸುತ್ತಿರುವಾಗಲೇ ಮತ್ತೊಮ್ಮೆ ಚಿರತೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಘಟನೆ ಜರುಗಿದೆ.
ಚಿಕ್ಕಿಂದು ವಾಡಿ ಗ್ರಾಮದಿಂದ ಪಾಳ್ಯ ಗ್ರಾಮಕ್ಕೆ ತೆರಳುವ ರಸ್ತೆಯ ಮಾರ್ಗ ಮಧ್ಯ ಪುಟ್ಟಪ್ಪನಕೆರೆ ಬಳಿ ಚಿರತೆಯನ್ನು ನೋಡಿದ ಬೈಕ್ ಸವಾರರು ಹೆದರಿ ಘಟನೆ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.

ಪದೇಪದೇ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಕೇಳಿರುವ ಗ್ರಾಮಸ್ಥರು ಜೊತೆಗೆ ಹಸು ಬೇಟೆಯಾಡಿ ತಿಂದಿರುವ ಘಟನೆಯನ್ನು ಮೆಲಕು ಹಾಕುತ್ತಾ ಭಯದಿಂದಲೇ ತಮ್ಮ ಜಮೀನುಗಳಿಗೆ ತೆರಳುತ್ತಿದ್ದಾರೆ. ಈ ಕೂಡಲೇ ಅರಣ್ಯ ಇಲಾಖೆಯವರು ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕರೀನಾಪುರ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಹಸುವಿನ ಮಾಲೀಕರಿಗೆ ಈಗಾಗಲೇ ಪರಿಹಾರ ನೀಡಿದ್ದೇವೆ. ಪ್ರತ್ಯಕ್ಷವಾಗುತ್ತಿರುವುದು ಗಮನಕ್ಕೆ ಬಂದಿದ್ದು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇಂದಿನಿಂದಲೇ ರಾತ್ರಿಗಸ್ತು ಪ್ರಾರಂಭಿಸಿ ಚಿರತೆಯ ಚಲನ ವಲನದ ಬಗ್ಗೆ ಬಗ್ಗೆ ನಿಗ ಇಡಲಾಗುವುದು. ನಂತರ ಚಿರತೆ ಕಾಣಿಸಿಕೊಂಡಲ್ಲಿ ಚಿರತೆ ಹಿಡಿಯಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರೈತರು ಹಾಗೂ ಸಾರ್ವಜನಿಕರು ರಾತ್ರಿ ವೇಳೆಯಲ್ಲಿ ಒಬ್ಬರೇ ಓಡಾಡಬಾರದು. ಅನಿವಾರ್ಯ ಸಂದರ್ಭಗಳಲ್ಲಿ ಒಬ್ಬರೇ ಹೋಗಬೇಕಾದರೆ ಸದ್ದು ಮಾಡಿಕೊಂಡು ತೆರಳಿ ಇಲಾಖೆಗೆ ಸಹಕರಿಸಬೇಕು ಎಂದು ಹನೂರು ವಲಯದ ಬಫರ್ ಆರ್‌ಎಫ್ಓ ಪ್ರವೀಣ್ ಪತ್ರಿಕೆಗೆ ತಿಳಿಸಿದ್ದಾರೆ.

 

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

5 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

5 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

5 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

6 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

6 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

6 hours ago