ಹನೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕೆಬ್ಬೆಹುಂಡಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಶಾಲಾ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮಾಸುತ್ತಿರುವಾಗಲೇ ಕ್ಷೇತ್ರ ವ್ಯಾಪ್ತಿಯ ಕರಿಯನಪುರ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿರುವುದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.
ಕಳೆದ ಮಂಗಳವಾರ ಕರಿಯನ ಪುರದ ರಾಚಯ್ಯ ಎಂಬುವರ ಹಸುವನ್ನು ಚಿರತೆ ಬೇಟೆಯಾಡಿ ತಿಂದು ಹೋಗಿದ್ದ ಘಟನೆಮಾಸುತ್ತಿರುವಾಗಲೇ ಮತ್ತೊಮ್ಮೆ ಚಿರತೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಘಟನೆ ಜರುಗಿದೆ.
ಚಿಕ್ಕಿಂದು ವಾಡಿ ಗ್ರಾಮದಿಂದ ಪಾಳ್ಯ ಗ್ರಾಮಕ್ಕೆ ತೆರಳುವ ರಸ್ತೆಯ ಮಾರ್ಗ ಮಧ್ಯ ಪುಟ್ಟಪ್ಪನಕೆರೆ ಬಳಿ ಚಿರತೆಯನ್ನು ನೋಡಿದ ಬೈಕ್ ಸವಾರರು ಹೆದರಿ ಘಟನೆ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.
ಪದೇಪದೇ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಕೇಳಿರುವ ಗ್ರಾಮಸ್ಥರು ಜೊತೆಗೆ ಹಸು ಬೇಟೆಯಾಡಿ ತಿಂದಿರುವ ಘಟನೆಯನ್ನು ಮೆಲಕು ಹಾಕುತ್ತಾ ಭಯದಿಂದಲೇ ತಮ್ಮ ಜಮೀನುಗಳಿಗೆ ತೆರಳುತ್ತಿದ್ದಾರೆ. ಈ ಕೂಡಲೇ ಅರಣ್ಯ ಇಲಾಖೆಯವರು ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕರೀನಾಪುರ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಹಸುವಿನ ಮಾಲೀಕರಿಗೆ ಈಗಾಗಲೇ ಪರಿಹಾರ ನೀಡಿದ್ದೇವೆ. ಪ್ರತ್ಯಕ್ಷವಾಗುತ್ತಿರುವುದು ಗಮನಕ್ಕೆ ಬಂದಿದ್ದು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇಂದಿನಿಂದಲೇ ರಾತ್ರಿಗಸ್ತು ಪ್ರಾರಂಭಿಸಿ ಚಿರತೆಯ ಚಲನ ವಲನದ ಬಗ್ಗೆ ಬಗ್ಗೆ ನಿಗ ಇಡಲಾಗುವುದು. ನಂತರ ಚಿರತೆ ಕಾಣಿಸಿಕೊಂಡಲ್ಲಿ ಚಿರತೆ ಹಿಡಿಯಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರೈತರು ಹಾಗೂ ಸಾರ್ವಜನಿಕರು ರಾತ್ರಿ ವೇಳೆಯಲ್ಲಿ ಒಬ್ಬರೇ ಓಡಾಡಬಾರದು. ಅನಿವಾರ್ಯ ಸಂದರ್ಭಗಳಲ್ಲಿ ಒಬ್ಬರೇ ಹೋಗಬೇಕಾದರೆ ಸದ್ದು ಮಾಡಿಕೊಂಡು ತೆರಳಿ ಇಲಾಖೆಗೆ ಸಹಕರಿಸಬೇಕು ಎಂದು ಹನೂರು ವಲಯದ ಬಫರ್ ಆರ್ಎಫ್ಓ ಪ್ರವೀಣ್ ಪತ್ರಿಕೆಗೆ ತಿಳಿಸಿದ್ದಾರೆ.
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…