ಹನೂರು : ಅಕ್ರಮವಾಗಿ ಮಾರಾಟ ಮಾಡಲು ಒಣ ಗಾಂಜಾವನ್ನು ಸಿದ್ದಪಡಿಸಿ ಇಟ್ಟುಕೊಂಡಿದ್ದ ವ್ಯಕ್ತಿಯೊರ್ವನ ಮನೆ ಮೇಲೆ ಹನೂರು ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಬೂದಿ ಪಡಗ ಗ್ರಾಮದ ಶಿವಮಾದಶೆಟ್ಟಿ (55) ಬಂಧಿತ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ಅಕ್ರಮ ಗಾಂಜಾ ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಶಶಿಕುಮಾರ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಬಂಧಿತನಿಂದ 300 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಬಂಧಿತನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ದಾಳಿಯಲ್ಲಿ ಪೇದೆಗಳಾದ ರಾಘವೇಂದ್ರ,ಚೇತನ್ ಕುಮಾರ್,ಪ್ರಭು,ರಾಮಕೃಷ್ಣ ಮತ್ತು ಶಿವಕುಮಾರ್, ಗ್ರಾಮ ಆಡಳಿತ ಅಧಿಕಾರಿ ಕುಮಾರ್, ತಾಲೂಕು ಪಂಚಾಯಿತಿ ಮ್ಯಾನೇಜರ್ ಶಂಕರ್ ಪಾಲ್ಗೊಂಡಿದ್ದರು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…