ಹನೂರು : ಅಕ್ರಮವಾಗಿ ಮಾರಾಟ ಮಾಡಲು ಒಣ ಗಾಂಜಾವನ್ನು ಸಿದ್ದಪಡಿಸಿ ಇಟ್ಟುಕೊಂಡಿದ್ದ ವ್ಯಕ್ತಿಯೊರ್ವನ ಮನೆ ಮೇಲೆ ಹನೂರು ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಬೂದಿ ಪಡಗ ಗ್ರಾಮದ ಶಿವಮಾದಶೆಟ್ಟಿ (55) ಬಂಧಿತ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ಅಕ್ರಮ ಗಾಂಜಾ ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಶಶಿಕುಮಾರ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಬಂಧಿತನಿಂದ 300 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಬಂಧಿತನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ದಾಳಿಯಲ್ಲಿ ಪೇದೆಗಳಾದ ರಾಘವೇಂದ್ರ,ಚೇತನ್ ಕುಮಾರ್,ಪ್ರಭು,ರಾಮಕೃಷ್ಣ ಮತ್ತು ಶಿವಕುಮಾರ್, ಗ್ರಾಮ ಆಡಳಿತ ಅಧಿಕಾರಿ ಕುಮಾರ್, ತಾಲೂಕು ಪಂಚಾಯಿತಿ ಮ್ಯಾನೇಜರ್ ಶಂಕರ್ ಪಾಲ್ಗೊಂಡಿದ್ದರು.
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ…
ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…
ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಈ…
ನವದೆಹಲಿ: ಕಾಂಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್.6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…