ಹನೂರು : ರಾಜ್ಯಾದ್ಯಂತ ಕಾಂಗ್ರೆಸ್ ಟಿಕೆಟ್ ಗೆ ಬಾರಿ ಪೈಪೋಟಿ ನಡೆಯುತ್ತಿದೆ ಆದರೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಲಿ ಶಾಸಕ ಆರ್ ನರೇಂದ್ರ ಅವರನ್ನು ಹೊರತುಪಡಿಸಿ ಇನ್ಯಾರು ಅರ್ಜಿ ಸಲ್ಲಿಸಿಲ್ಲ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಹಾಲಿ ಶಾಸಕ ಆರ್ ನರೇಂದ್ರ ರವರು ಈಗಾಗಲೇ ನಾಲ್ಕು ಚುನಾವಣೆಗಳಲ್ಲಿ ಸ್ಪರ್ಧಿಸಿ, ಮೊಟ್ಟ ಮೊದಲ ಚುನಾವಣೆಯಲ್ಲಿ ಪರಾಭವಗೊಂಡರು ಎದೆಗುಂದದೆ ಸತತ ಮೂರು ಚುನಾವಣೆಗಳಲ್ಲಿ ಜಯಗಳಿಸುವ ಮೂಲಕ ಕ್ಷೇತ್ರದಲ್ಲಿ ಯಾರೂ ಮಾಡದ ಸಾಧನೆಯನ್ನು ಮಾಡಿ ತೋರಿಸಿ ಮನೆತನದ ಹೆಸರನ್ನು ಗಟ್ಟಿಗೊಳಿಸಿದ್ದಾರೆ.
ರಾಜ್ಯಗಳ ಪುನರ್ ವಿಂಗಡಣೆಗೆ ಮೊದಲು ಹನೂರು ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. 1957 ರ ಕೊಳ್ಳೇಗಾಲ ಹಾಗೂ ಪಾಳ್ಯ ಎಂಬ ಹೆಸರಿನ ಎರಡು ವಿಧಾನಸಭಾ ಕ್ಷೇತ್ರ ಉದಯವಾಗಿ ಪಾಳ್ಯ ಕ್ಷೇತ್ರದಿಂದ ಹಾಲಿ ಶಾಸಕ ಆರ್ ನರೇಂದ್ರರವರ ದೊಡ್ಡಪ್ಪ ಜಿ ವೆಂಕಟೇಗೌಡ ಪ್ರಥಮ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.1962 ರಲ್ಲಿ ಪಾಳ್ಯ ಹನೂರು ಕ್ಷೇತ್ರವಾಗಿ ನಾಮಕರಣಗೊಂಡಿತು.
ಕ್ಷೇತ್ರದಲ್ಲಿ ದೊಡ್ಡಪ್ಪ ಎರಡು ಬಾರಿ,ತಂದೆ ಮಾಜಿ ಸಚಿವ ದಿ. ಜಿ ರಾಜು ಗೌಡ ನಾಲ್ಕು ಬಾರಿ, ಜಿ ರಾಜುಗೌಡ ರವರ ಸುಪುತ್ರ ಆರ್ ನರೇಂದ್ರ ಮೂರು ಬಾರಿ ಕ್ಷೇತ್ರದಲ್ಲಿ ಸುದೀರ್ಘ 45 ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ.
ಹನೂರು ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆ : ಹನೂರು ಕ್ಷೇತ್ರದ ವೈಶಿಷ್ಟವೇನೆಂದರೆ ಮಾಜಿ ಸಚಿವ ದಿ ರಾಜುಗೌಡ ಹಾಗೂ ದಿ. ಹೆಚ್ ನಾಗಪ್ಪ ಎಂಬ ಹೆಸರು ರಾಜ್ಯದಲ್ಲಿಯೇ ಪ್ರಸಿದ್ಧಿ, ಎರಡು ಮನೆತನದ ಅಭ್ಯರ್ಥಿಗಳೇ ರಾಜ್ಯಗಳ ಪುನರ್ ವಿಂಗಡಣೆಯ ನಂತರ ಎರಡು ಚುನಾವಣೆಗಳನ್ನು ಹೊರತುಪಡಿಸಿ ಇದುವರೆಗೂ ಸ್ಪರ್ಧಿಸಿ ಜಯಗಳಿಸಿರುವುದು ವಿಶೇಷ. ದಿವಂಗತ ಎಚ್ ನಾಗಪ್ಪ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಒಟ್ಟು 9 ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸಿ ಕಾಂಗ್ರೆಸ್ ನ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ.
ಖಾತೆ ತೆರೆಯದ ಬಿಜೆಪಿ : ಇದುವರೆಗೂ 14 ಚುನಾವಣೆಗಳ ನಡೆದಿದ್ದು ಒಂದು ಬಾರಿಯೂ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿಲ್ಲ, ಇದುವರೆಗೆ ಪಕ್ಷೇತರರು 3 ಬಾರಿ, ಕಾಂಗ್ರೆಸ್ ಅಭ್ಯರ್ಥಿಗಳು, ಎರಡು ಬಾರಿ ಜನತಾದಳ ಅಭ್ಯರ್ಥಿಗಳು, ಜಾತ್ಯತೀತ ಜನತಾದಳ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.
ಕ್ಷೇತ್ರದಲ್ಲಿ ಕಾಂಗ್ರೆಸ್, ಜಾತ್ಯತೀತ ಜನತಾದಳ,ಬಿಜೆಪಿ ಎನ್ನುವುದಕ್ಕಿಂತ ಮಾಜಿ ಸಚಿವ ದಿ.ರಾಜುಗೌಡ ಹಾಗೂ ಹೆಚ್ ನಾಗಪ್ಪ ರವರ ಮನೆತನಗಳ ಚುನಾವಣೆ ಎಂದು ಬಿಂಬಿಸಲಾಗುತ್ತಿದೆ. ಈ ಬಾರಿಯಾದರೂ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯಾದರೂ ಬಿಜೆಪಿ ಖಾತೆ ತೆರೆಯಲಿದೆಯೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ.
ವರದಿ: ಮಹಾದೇಶ್ ಎಂ ಗೌಡ
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…