ಜಿಲ್ಲೆಗಳು

ಹನೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನದ್ದೇ ದರ್ಬಾರ್, ಖಾತೆ ತೆರೆಯದ ಬಿಜೆಪಿ

ಹನೂರು : ರಾಜ್ಯಾದ್ಯಂತ ಕಾಂಗ್ರೆಸ್ ಟಿಕೆಟ್ ಗೆ ಬಾರಿ ಪೈಪೋಟಿ ನಡೆಯುತ್ತಿದೆ ಆದರೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಲಿ ಶಾಸಕ ಆರ್ ನರೇಂದ್ರ ಅವರನ್ನು ಹೊರತುಪಡಿಸಿ ಇನ್ಯಾರು ಅರ್ಜಿ ಸಲ್ಲಿಸಿಲ್ಲ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಹಾಲಿ ಶಾಸಕ ಆರ್ ನರೇಂದ್ರ ರವರು ಈಗಾಗಲೇ ನಾಲ್ಕು ಚುನಾವಣೆಗಳಲ್ಲಿ ಸ್ಪರ್ಧಿಸಿ, ಮೊಟ್ಟ ಮೊದಲ ಚುನಾವಣೆಯಲ್ಲಿ ಪರಾಭವಗೊಂಡರು ಎದೆಗುಂದದೆ ಸತತ ಮೂರು ಚುನಾವಣೆಗಳಲ್ಲಿ ಜಯಗಳಿಸುವ ಮೂಲಕ ಕ್ಷೇತ್ರದಲ್ಲಿ ಯಾರೂ ಮಾಡದ ಸಾಧನೆಯನ್ನು ಮಾಡಿ ತೋರಿಸಿ ಮನೆತನದ ಹೆಸರನ್ನು ಗಟ್ಟಿಗೊಳಿಸಿದ್ದಾರೆ.

ರಾಜುಗೌಡ

ರಾಜ್ಯಗಳ ಪುನರ್ ವಿಂಗಡಣೆಗೆ ಮೊದಲು ಹನೂರು ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. 1957 ರ ಕೊಳ್ಳೇಗಾಲ ಹಾಗೂ ಪಾಳ್ಯ ಎಂಬ ಹೆಸರಿನ ಎರಡು ವಿಧಾನಸಭಾ ಕ್ಷೇತ್ರ ಉದಯವಾಗಿ ಪಾಳ್ಯ ಕ್ಷೇತ್ರದಿಂದ ಹಾಲಿ ಶಾಸಕ ಆರ್ ನರೇಂದ್ರರವರ ದೊಡ್ಡಪ್ಪ ಜಿ ವೆಂಕಟೇಗೌಡ ಪ್ರಥಮ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.1962 ರಲ್ಲಿ ಪಾಳ್ಯ ಹನೂರು ಕ್ಷೇತ್ರವಾಗಿ ನಾಮಕರಣಗೊಂಡಿತು.

ವೆಂಕಟೇಗೌಡ

ಕ್ಷೇತ್ರದಲ್ಲಿ ದೊಡ್ಡಪ್ಪ ಎರಡು ಬಾರಿ,ತಂದೆ ಮಾಜಿ ಸಚಿವ ದಿ. ಜಿ ರಾಜು ಗೌಡ ನಾಲ್ಕು ಬಾರಿ, ಜಿ ರಾಜುಗೌಡ ರವರ ಸುಪುತ್ರ ಆರ್ ನರೇಂದ್ರ ಮೂರು ಬಾರಿ ಕ್ಷೇತ್ರದಲ್ಲಿ ಸುದೀರ್ಘ 45 ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ.

ಶಾಸಕ ಆರ್ ನರೇಂದ್ರ

ಹನೂರು ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆ : ಹನೂರು ಕ್ಷೇತ್ರದ ವೈಶಿಷ್ಟವೇನೆಂದರೆ ಮಾಜಿ ಸಚಿವ ದಿ ರಾಜುಗೌಡ ಹಾಗೂ ದಿ. ಹೆಚ್ ನಾಗಪ್ಪ ಎಂಬ ಹೆಸರು ರಾಜ್ಯದಲ್ಲಿಯೇ ಪ್ರಸಿದ್ಧಿ, ಎರಡು ಮನೆತನದ ಅಭ್ಯರ್ಥಿಗಳೇ ರಾಜ್ಯಗಳ ಪುನರ್ ವಿಂಗಡಣೆಯ ನಂತರ ಎರಡು ಚುನಾವಣೆಗಳನ್ನು ಹೊರತುಪಡಿಸಿ ಇದುವರೆಗೂ ಸ್ಪರ್ಧಿಸಿ ಜಯಗಳಿಸಿರುವುದು ವಿಶೇಷ. ದಿವಂಗತ ಎಚ್ ನಾಗಪ್ಪ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಒಟ್ಟು 9 ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸಿ ಕಾಂಗ್ರೆಸ್ ನ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಖಾತೆ ತೆರೆಯದ ಬಿಜೆಪಿ : ಇದುವರೆಗೂ 14 ಚುನಾವಣೆಗಳ ನಡೆದಿದ್ದು ಒಂದು ಬಾರಿಯೂ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿಲ್ಲ, ಇದುವರೆಗೆ ಪಕ್ಷೇತರರು 3 ಬಾರಿ, ಕಾಂಗ್ರೆಸ್ ಅಭ್ಯರ್ಥಿಗಳು, ಎರಡು ಬಾರಿ ಜನತಾದಳ ಅಭ್ಯರ್ಥಿಗಳು, ಜಾತ್ಯತೀತ ಜನತಾದಳ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.

ಕ್ಷೇತ್ರದಲ್ಲಿ ಕಾಂಗ್ರೆಸ್, ಜಾತ್ಯತೀತ ಜನತಾದಳ,ಬಿಜೆಪಿ ಎನ್ನುವುದಕ್ಕಿಂತ ಮಾಜಿ ಸಚಿವ ದಿ.ರಾಜುಗೌಡ ಹಾಗೂ ಹೆಚ್ ನಾಗಪ್ಪ ರವರ ಮನೆತನಗಳ ಚುನಾವಣೆ ಎಂದು ಬಿಂಬಿಸಲಾಗುತ್ತಿದೆ. ಈ ಬಾರಿಯಾದರೂ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯಾದರೂ ಬಿಜೆಪಿ ಖಾತೆ ತೆರೆಯಲಿದೆಯೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ.

ವರದಿ: ಮಹಾದೇಶ್ ಎಂ ಗೌಡ

andolanait

Recent Posts

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

19 mins ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

42 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

1 hour ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

2 hours ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

2 hours ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

3 hours ago