ಜಿಲ್ಲೆಗಳು

ಹನೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನದ್ದೇ ದರ್ಬಾರ್, ಖಾತೆ ತೆರೆಯದ ಬಿಜೆಪಿ

ಹನೂರು : ರಾಜ್ಯಾದ್ಯಂತ ಕಾಂಗ್ರೆಸ್ ಟಿಕೆಟ್ ಗೆ ಬಾರಿ ಪೈಪೋಟಿ ನಡೆಯುತ್ತಿದೆ ಆದರೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಲಿ ಶಾಸಕ ಆರ್ ನರೇಂದ್ರ ಅವರನ್ನು ಹೊರತುಪಡಿಸಿ ಇನ್ಯಾರು ಅರ್ಜಿ ಸಲ್ಲಿಸಿಲ್ಲ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಹಾಲಿ ಶಾಸಕ ಆರ್ ನರೇಂದ್ರ ರವರು ಈಗಾಗಲೇ ನಾಲ್ಕು ಚುನಾವಣೆಗಳಲ್ಲಿ ಸ್ಪರ್ಧಿಸಿ, ಮೊಟ್ಟ ಮೊದಲ ಚುನಾವಣೆಯಲ್ಲಿ ಪರಾಭವಗೊಂಡರು ಎದೆಗುಂದದೆ ಸತತ ಮೂರು ಚುನಾವಣೆಗಳಲ್ಲಿ ಜಯಗಳಿಸುವ ಮೂಲಕ ಕ್ಷೇತ್ರದಲ್ಲಿ ಯಾರೂ ಮಾಡದ ಸಾಧನೆಯನ್ನು ಮಾಡಿ ತೋರಿಸಿ ಮನೆತನದ ಹೆಸರನ್ನು ಗಟ್ಟಿಗೊಳಿಸಿದ್ದಾರೆ.

ರಾಜುಗೌಡ

ರಾಜ್ಯಗಳ ಪುನರ್ ವಿಂಗಡಣೆಗೆ ಮೊದಲು ಹನೂರು ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. 1957 ರ ಕೊಳ್ಳೇಗಾಲ ಹಾಗೂ ಪಾಳ್ಯ ಎಂಬ ಹೆಸರಿನ ಎರಡು ವಿಧಾನಸಭಾ ಕ್ಷೇತ್ರ ಉದಯವಾಗಿ ಪಾಳ್ಯ ಕ್ಷೇತ್ರದಿಂದ ಹಾಲಿ ಶಾಸಕ ಆರ್ ನರೇಂದ್ರರವರ ದೊಡ್ಡಪ್ಪ ಜಿ ವೆಂಕಟೇಗೌಡ ಪ್ರಥಮ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.1962 ರಲ್ಲಿ ಪಾಳ್ಯ ಹನೂರು ಕ್ಷೇತ್ರವಾಗಿ ನಾಮಕರಣಗೊಂಡಿತು.

ವೆಂಕಟೇಗೌಡ

ಕ್ಷೇತ್ರದಲ್ಲಿ ದೊಡ್ಡಪ್ಪ ಎರಡು ಬಾರಿ,ತಂದೆ ಮಾಜಿ ಸಚಿವ ದಿ. ಜಿ ರಾಜು ಗೌಡ ನಾಲ್ಕು ಬಾರಿ, ಜಿ ರಾಜುಗೌಡ ರವರ ಸುಪುತ್ರ ಆರ್ ನರೇಂದ್ರ ಮೂರು ಬಾರಿ ಕ್ಷೇತ್ರದಲ್ಲಿ ಸುದೀರ್ಘ 45 ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ.

ಶಾಸಕ ಆರ್ ನರೇಂದ್ರ

ಹನೂರು ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆ : ಹನೂರು ಕ್ಷೇತ್ರದ ವೈಶಿಷ್ಟವೇನೆಂದರೆ ಮಾಜಿ ಸಚಿವ ದಿ ರಾಜುಗೌಡ ಹಾಗೂ ದಿ. ಹೆಚ್ ನಾಗಪ್ಪ ಎಂಬ ಹೆಸರು ರಾಜ್ಯದಲ್ಲಿಯೇ ಪ್ರಸಿದ್ಧಿ, ಎರಡು ಮನೆತನದ ಅಭ್ಯರ್ಥಿಗಳೇ ರಾಜ್ಯಗಳ ಪುನರ್ ವಿಂಗಡಣೆಯ ನಂತರ ಎರಡು ಚುನಾವಣೆಗಳನ್ನು ಹೊರತುಪಡಿಸಿ ಇದುವರೆಗೂ ಸ್ಪರ್ಧಿಸಿ ಜಯಗಳಿಸಿರುವುದು ವಿಶೇಷ. ದಿವಂಗತ ಎಚ್ ನಾಗಪ್ಪ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಒಟ್ಟು 9 ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸಿ ಕಾಂಗ್ರೆಸ್ ನ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಖಾತೆ ತೆರೆಯದ ಬಿಜೆಪಿ : ಇದುವರೆಗೂ 14 ಚುನಾವಣೆಗಳ ನಡೆದಿದ್ದು ಒಂದು ಬಾರಿಯೂ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿಲ್ಲ, ಇದುವರೆಗೆ ಪಕ್ಷೇತರರು 3 ಬಾರಿ, ಕಾಂಗ್ರೆಸ್ ಅಭ್ಯರ್ಥಿಗಳು, ಎರಡು ಬಾರಿ ಜನತಾದಳ ಅಭ್ಯರ್ಥಿಗಳು, ಜಾತ್ಯತೀತ ಜನತಾದಳ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.

ಕ್ಷೇತ್ರದಲ್ಲಿ ಕಾಂಗ್ರೆಸ್, ಜಾತ್ಯತೀತ ಜನತಾದಳ,ಬಿಜೆಪಿ ಎನ್ನುವುದಕ್ಕಿಂತ ಮಾಜಿ ಸಚಿವ ದಿ.ರಾಜುಗೌಡ ಹಾಗೂ ಹೆಚ್ ನಾಗಪ್ಪ ರವರ ಮನೆತನಗಳ ಚುನಾವಣೆ ಎಂದು ಬಿಂಬಿಸಲಾಗುತ್ತಿದೆ. ಈ ಬಾರಿಯಾದರೂ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯಾದರೂ ಬಿಜೆಪಿ ಖಾತೆ ತೆರೆಯಲಿದೆಯೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ.

ವರದಿ: ಮಹಾದೇಶ್ ಎಂ ಗೌಡ

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago