ಜಿಲ್ಲೆಗಳು

ಹನೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನದ್ದೇ ದರ್ಬಾರ್, ಖಾತೆ ತೆರೆಯದ ಬಿಜೆಪಿ

ಹನೂರು : ರಾಜ್ಯಾದ್ಯಂತ ಕಾಂಗ್ರೆಸ್ ಟಿಕೆಟ್ ಗೆ ಬಾರಿ ಪೈಪೋಟಿ ನಡೆಯುತ್ತಿದೆ ಆದರೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಲಿ ಶಾಸಕ ಆರ್ ನರೇಂದ್ರ ಅವರನ್ನು ಹೊರತುಪಡಿಸಿ ಇನ್ಯಾರು ಅರ್ಜಿ ಸಲ್ಲಿಸಿಲ್ಲ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಹಾಲಿ ಶಾಸಕ ಆರ್ ನರೇಂದ್ರ ರವರು ಈಗಾಗಲೇ ನಾಲ್ಕು ಚುನಾವಣೆಗಳಲ್ಲಿ ಸ್ಪರ್ಧಿಸಿ, ಮೊಟ್ಟ ಮೊದಲ ಚುನಾವಣೆಯಲ್ಲಿ ಪರಾಭವಗೊಂಡರು ಎದೆಗುಂದದೆ ಸತತ ಮೂರು ಚುನಾವಣೆಗಳಲ್ಲಿ ಜಯಗಳಿಸುವ ಮೂಲಕ ಕ್ಷೇತ್ರದಲ್ಲಿ ಯಾರೂ ಮಾಡದ ಸಾಧನೆಯನ್ನು ಮಾಡಿ ತೋರಿಸಿ ಮನೆತನದ ಹೆಸರನ್ನು ಗಟ್ಟಿಗೊಳಿಸಿದ್ದಾರೆ.

ರಾಜುಗೌಡ

ರಾಜ್ಯಗಳ ಪುನರ್ ವಿಂಗಡಣೆಗೆ ಮೊದಲು ಹನೂರು ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. 1957 ರ ಕೊಳ್ಳೇಗಾಲ ಹಾಗೂ ಪಾಳ್ಯ ಎಂಬ ಹೆಸರಿನ ಎರಡು ವಿಧಾನಸಭಾ ಕ್ಷೇತ್ರ ಉದಯವಾಗಿ ಪಾಳ್ಯ ಕ್ಷೇತ್ರದಿಂದ ಹಾಲಿ ಶಾಸಕ ಆರ್ ನರೇಂದ್ರರವರ ದೊಡ್ಡಪ್ಪ ಜಿ ವೆಂಕಟೇಗೌಡ ಪ್ರಥಮ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.1962 ರಲ್ಲಿ ಪಾಳ್ಯ ಹನೂರು ಕ್ಷೇತ್ರವಾಗಿ ನಾಮಕರಣಗೊಂಡಿತು.

ವೆಂಕಟೇಗೌಡ

ಕ್ಷೇತ್ರದಲ್ಲಿ ದೊಡ್ಡಪ್ಪ ಎರಡು ಬಾರಿ,ತಂದೆ ಮಾಜಿ ಸಚಿವ ದಿ. ಜಿ ರಾಜು ಗೌಡ ನಾಲ್ಕು ಬಾರಿ, ಜಿ ರಾಜುಗೌಡ ರವರ ಸುಪುತ್ರ ಆರ್ ನರೇಂದ್ರ ಮೂರು ಬಾರಿ ಕ್ಷೇತ್ರದಲ್ಲಿ ಸುದೀರ್ಘ 45 ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ.

ಶಾಸಕ ಆರ್ ನರೇಂದ್ರ

ಹನೂರು ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆ : ಹನೂರು ಕ್ಷೇತ್ರದ ವೈಶಿಷ್ಟವೇನೆಂದರೆ ಮಾಜಿ ಸಚಿವ ದಿ ರಾಜುಗೌಡ ಹಾಗೂ ದಿ. ಹೆಚ್ ನಾಗಪ್ಪ ಎಂಬ ಹೆಸರು ರಾಜ್ಯದಲ್ಲಿಯೇ ಪ್ರಸಿದ್ಧಿ, ಎರಡು ಮನೆತನದ ಅಭ್ಯರ್ಥಿಗಳೇ ರಾಜ್ಯಗಳ ಪುನರ್ ವಿಂಗಡಣೆಯ ನಂತರ ಎರಡು ಚುನಾವಣೆಗಳನ್ನು ಹೊರತುಪಡಿಸಿ ಇದುವರೆಗೂ ಸ್ಪರ್ಧಿಸಿ ಜಯಗಳಿಸಿರುವುದು ವಿಶೇಷ. ದಿವಂಗತ ಎಚ್ ನಾಗಪ್ಪ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಒಟ್ಟು 9 ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸಿ ಕಾಂಗ್ರೆಸ್ ನ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಖಾತೆ ತೆರೆಯದ ಬಿಜೆಪಿ : ಇದುವರೆಗೂ 14 ಚುನಾವಣೆಗಳ ನಡೆದಿದ್ದು ಒಂದು ಬಾರಿಯೂ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿಲ್ಲ, ಇದುವರೆಗೆ ಪಕ್ಷೇತರರು 3 ಬಾರಿ, ಕಾಂಗ್ರೆಸ್ ಅಭ್ಯರ್ಥಿಗಳು, ಎರಡು ಬಾರಿ ಜನತಾದಳ ಅಭ್ಯರ್ಥಿಗಳು, ಜಾತ್ಯತೀತ ಜನತಾದಳ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.

ಕ್ಷೇತ್ರದಲ್ಲಿ ಕಾಂಗ್ರೆಸ್, ಜಾತ್ಯತೀತ ಜನತಾದಳ,ಬಿಜೆಪಿ ಎನ್ನುವುದಕ್ಕಿಂತ ಮಾಜಿ ಸಚಿವ ದಿ.ರಾಜುಗೌಡ ಹಾಗೂ ಹೆಚ್ ನಾಗಪ್ಪ ರವರ ಮನೆತನಗಳ ಚುನಾವಣೆ ಎಂದು ಬಿಂಬಿಸಲಾಗುತ್ತಿದೆ. ಈ ಬಾರಿಯಾದರೂ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯಾದರೂ ಬಿಜೆಪಿ ಖಾತೆ ತೆರೆಯಲಿದೆಯೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ.

ವರದಿ: ಮಹಾದೇಶ್ ಎಂ ಗೌಡ

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago