ಹನೂರು : ಕಳೆದ ಒಂದು ವಾರದಿಂದ ಬಿಆರ್ ಟಿ ಅರಣ್ಯ ಪ್ರದೇಶ ಹಾಗೂ ಒಡೆಯರಪಾಳ್ಯ ಸುತ್ತಮುತ್ತ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಹುಬ್ಬೆ ಹುಣಸೆ ಜಲಾಶಯ ತುಂಬಿ ಕೋಡಿ ಬಿದ್ದ ಪರಿಣಾಮ ಹನೂರು- ಲೊಕ್ಕನಹಳ್ಳಿ ಮುಖ್ಯ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.
ಅಂದಿನಿಂದ ಇಂದಿನವರೆಗೂ ಕಾಮಗಾರಿ ಪ್ರಾರಂಭ ಮಾಡದೆ ಇರುವುದರಿಂದ ಸೇತುವೆ ಕಾಮಗಾರಿ ಅಪೂರ್ಣಗೊಂಡಿದೆ.ಇದರಿಂದ ಸಾರ್ವಜನಿಕರು ದ್ವಿಚಕ್ರ ವಾಹನ ಸವಾರರು ತೀವ್ರ ತೊಂದರೆಗೊಳಗಾಗಿದ್ದಾರೆ.
ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಹುಬ್ಬೆ ಹುಣಸೆ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ಅಧಿಕ ಪ್ರಮಾಣದ ನೀರು ಹೊರ ಬರುತ್ತಿರುವ ಹಿನ್ನೆಲೆ ಲೊಕ್ಕನಹಳ್ಳಿ ಮಾರ್ಗದ ಸೇತುವೆ ಮೇಲೆ ಯಥೇಚ್ಚ ನೀರು ಹರಿಯುತ್ತಿದೆ. ಆದರೂ ಸಹ ದ್ವಿಚಕ್ರ ವಾಹನ ಸವಾರರು ಈ ನೀರಿನಲ್ಲೇ ದುಸ್ಸಾಹಸಕ್ಕೆ ಕೈಹಾಕಿ ಸಂಚಾರ ಮಾಡುತ್ತಿದ್ದಾರೆ ಅಪಾಯ ಅನಾಹುತಗಳು ಸಂಭವಿಸುವ ಮುನ್ನ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಬೇಜವಾಬ್ದಾರಿ ಅಭಿಯಂತರ ಚಿನ್ನಣ್ಣ : ಹನೂರು ಪಟ್ಟಣ ವ್ಯಾಪ್ತಿಯ ಬಂಡಳ್ಳಿ ಮುಖ್ಯ ರಸ್ತೆಯಲ್ಲಿ ಹಾಗೂ ಲೊಕ್ಕನಹಳ್ಳಿ ಮುಖ್ಯರಸ್ತೆಯಲ್ಲಿ ಎರಡು ಸೇತುವೆ ಕಾಮಗಾರಿಗಳು ಪ್ರಗತಿ ಹಂತದಲ್ಲಿದೆ. ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಶಾಸಕ ಆರ್ ನರೇಂದ್ರ ಭೂಮಿಪೂಜೆ ವೇಳೆ ಅಭಿಯಂತರರಿಗೆ ಸೂಚನೆ ನೀಡಿದ್ದರು. ಕಾಮಗಾರಿ ಪ್ರಾರಂಭವಾಗಿ 4 ತಿಂಗಳು ಕಳೆದರೂ ಸಹ ಅಭಿಯಂತರ ಚಿನ್ನಣ್ಣ ಸೂಕ್ತ ಕ್ರಮಕೈಗೊಳ್ಳದೆ ತಮ್ಮ ಕರ್ತವ್ಯದಲ್ಲಿ ಲೋಪವೆಸಗಿದ್ದಾರೆ. ಇದಲ್ಲದೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದುರಸ್ತಿಗೊಂಡಿರುವ ರಸ್ತೆಗಳ ಬಗ್ಗೆ ಹಲವಾರು ಬಾರಿ ಇಲಾಖೆಗೆ ಮನವಿ ನೀಡಿದ್ದರೂ ಸಹ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ ಆದ್ದರಿಂದ ಇವರನ್ನು ಬೇರೆಡೆಗೆ ವರ್ಗಾವಣೆ ಮಾಡುವಂತೆ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.
ರಸ್ತೆಗೆ ಬಿದ್ದ ಮರ : ಶುಕ್ರವಾರ ರಾತ್ರಿ ಬಿದ್ದ ಭಾರಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಪೊನ್ನಾಚಿ -ಕೌದಳ್ಳಿ ಮಾರ್ಗದ ರಸ್ತೆ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಇದರಿಂದ ಶಾಲಾ ಕಾಲೇಜುಗಳು ಹಾಗೂ ದಿನನಿತ್ಯದ ಕಚೇರಿಗಳಿಗೆ ಸೋಗೆಯ ಅಧಿಕಾರಿಗಳಿಗೆ ತೀವ್ರ ತೊಂದರೆಯಾಗಿದೆ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮರವನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡುವಂತೆ ಒತ್ತಾಯಿಸಿದ್ದಾರೆ.
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…
ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಎಂಬುವವರ ಪುತ್ರಿ ಪೂಜಾ…
ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…
ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ…
ಚಿಕ್ಕಬಳ್ಳಾಪುರ: ಇಸ್ರೇಲ್ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು,…
ದುಬೈ: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯು ತಾರಕ್ಕೇರಿರುವುದರಿಂದ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಈ…