ಜಿಲ್ಲೆಗಳು

ಹನೂರು : ಕೋಡಿ ಬಿದ್ದ ಜಲಾಶಯ ಸಂಚಾರಕ್ಕೆ ಅಡಚಣೆ

ಹನೂರು : ಕಳೆದ ಒಂದು ವಾರದಿಂದ ಬಿಆರ್ ಟಿ ಅರಣ್ಯ ಪ್ರದೇಶ ಹಾಗೂ ಒಡೆಯರಪಾಳ್ಯ ಸುತ್ತಮುತ್ತ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಹುಬ್ಬೆ ಹುಣಸೆ ಜಲಾಶಯ ತುಂಬಿ ಕೋಡಿ ಬಿದ್ದ ಪರಿಣಾಮ ಹನೂರು- ಲೊಕ್ಕನಹಳ್ಳಿ ಮುಖ್ಯ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

ಹನೂರು ಪಟ್ಟಣ ವ್ಯಾಪ್ತಿಯ ಎರಡನೆ ವಾರ್ಡ್ ನಲ್ಲಿ ಮೇಲ್ಸೇತುವೆ ಕಾಮಗಾರಿ ಪ್ರಗತಿ ಹಂತದಲ್ಲಿದೆ. ತಾತ್ಕಾಲಿಕವಾಗಿ ನಿರ್ಮಾಣ ಮಾಡಿದ್ದ ಸೇತುವೆ ಎರಡನೆ ಬಾರಿ ಕೊಚ್ಚಿಕೊಂಡು ಹೋಗಿರುವ ಪರಿಣಾಮ ಸಂಚಾರಕ್ಕೆ ತೊಂದರೆಯಾಗಿದೆ.

ಕಳೆದ 1ತಿಂಗಳ ಹಿಂದೆ ಬಿದ್ದ ಭಾರಿ ಮಳೆಗೆ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿ ತದನಂತರ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಅಧಿಕಾರಿಗಳಿಗೆ ಶೀಘ್ರವೇ ರಸ್ತೆ ದುರಸ್ತಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸೂಚನೆ ನೀಡಿದ್ದರು ಈ ಹಿನ್ನೆಲೆ ಗುತ್ತಿಗೆದಾರ ದುರಸ್ತಿಪಡಿಸಿದ್ದರು.


ಅಂದಿನಿಂದ ಇಂದಿನವರೆಗೂ ಕಾಮಗಾರಿ ಪ್ರಾರಂಭ ಮಾಡದೆ ಇರುವುದರಿಂದ ಸೇತುವೆ ಕಾಮಗಾರಿ ಅಪೂರ್ಣಗೊಂಡಿದೆ.ಇದರಿಂದ ಸಾರ್ವಜನಿಕರು ದ್ವಿಚಕ್ರ ವಾಹನ ಸವಾರರು ತೀವ್ರ ತೊಂದರೆಗೊಳಗಾಗಿದ್ದಾರೆ.

ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಹುಬ್ಬೆ ಹುಣಸೆ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ಅಧಿಕ ಪ್ರಮಾಣದ ನೀರು ಹೊರ ಬರುತ್ತಿರುವ ಹಿನ್ನೆಲೆ ಲೊಕ್ಕನಹಳ್ಳಿ ಮಾರ್ಗದ ಸೇತುವೆ ಮೇಲೆ ಯಥೇಚ್ಚ ನೀರು ಹರಿಯುತ್ತಿದೆ. ಆದರೂ ಸಹ ದ್ವಿಚಕ್ರ ವಾಹನ ಸವಾರರು ಈ ನೀರಿನಲ್ಲೇ ದುಸ್ಸಾಹಸಕ್ಕೆ ಕೈಹಾಕಿ ಸಂಚಾರ ಮಾಡುತ್ತಿದ್ದಾರೆ ಅಪಾಯ ಅನಾಹುತಗಳು ಸಂಭವಿಸುವ ಮುನ್ನ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

ಬೇಜವಾಬ್ದಾರಿ ಅಭಿಯಂತರ ಚಿನ್ನಣ್ಣ : ಹನೂರು ಪಟ್ಟಣ ವ್ಯಾಪ್ತಿಯ ಬಂಡಳ್ಳಿ ಮುಖ್ಯ ರಸ್ತೆಯಲ್ಲಿ ಹಾಗೂ ಲೊಕ್ಕನಹಳ್ಳಿ ಮುಖ್ಯರಸ್ತೆಯಲ್ಲಿ ಎರಡು ಸೇತುವೆ ಕಾಮಗಾರಿಗಳು ಪ್ರಗತಿ ಹಂತದಲ್ಲಿದೆ. ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಶಾಸಕ ಆರ್ ನರೇಂದ್ರ ಭೂಮಿಪೂಜೆ ವೇಳೆ ಅಭಿಯಂತರರಿಗೆ ಸೂಚನೆ ನೀಡಿದ್ದರು. ಕಾಮಗಾರಿ ಪ್ರಾರಂಭವಾಗಿ 4 ತಿಂಗಳು ಕಳೆದರೂ ಸಹ ಅಭಿಯಂತರ ಚಿನ್ನಣ್ಣ ಸೂಕ್ತ ಕ್ರಮಕೈಗೊಳ್ಳದೆ ತಮ್ಮ ಕರ್ತವ್ಯದಲ್ಲಿ ಲೋಪವೆಸಗಿದ್ದಾರೆ. ಇದಲ್ಲದೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದುರಸ್ತಿಗೊಂಡಿರುವ ರಸ್ತೆಗಳ ಬಗ್ಗೆ ಹಲವಾರು ಬಾರಿ ಇಲಾಖೆಗೆ ಮನವಿ ನೀಡಿದ್ದರೂ ಸಹ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ ಆದ್ದರಿಂದ ಇವರನ್ನು ಬೇರೆಡೆಗೆ ವರ್ಗಾವಣೆ ಮಾಡುವಂತೆ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

ರಸ್ತೆಗೆ ಬಿದ್ದ ಮರ : ಶುಕ್ರವಾರ ರಾತ್ರಿ ಬಿದ್ದ ಭಾರಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಪೊನ್ನಾಚಿ -ಕೌದಳ್ಳಿ ಮಾರ್ಗದ ರಸ್ತೆ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಇದರಿಂದ ಶಾಲಾ ಕಾಲೇಜುಗಳು ಹಾಗೂ ದಿನನಿತ್ಯದ ಕಚೇರಿಗಳಿಗೆ ಸೋಗೆಯ ಅಧಿಕಾರಿಗಳಿಗೆ ತೀವ್ರ ತೊಂದರೆಯಾಗಿದೆ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮರವನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡುವಂತೆ ಒತ್ತಾಯಿಸಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago