ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಹುಚ್ಚುನಾಯಿಗಳ ಹಾವಳಿ ಮಿತಿಮೀರಿದ್ದು ಗ್ರಾಮಸ್ಥರು ಹುಚ್ಚು ನಾಯಿ ದಾಳಿಗೆ ತುತ್ತಾಗಿ ಗಾಯಗೊಳ್ಳುತ್ತಿದ್ದಾರೆ.
ಮಾರ್ಟಳ್ಳಿ, ಹಳೇ ಮಾರ್ಟಳ್ಳಿ, ಸಂದನಪಾಳ್ಯ ಹಾಗೂ ಮೆಟ್ಟುತಿರುವು ಗ್ರಾಮದ ಜನರು ಹುಚ್ಚು ನಾಯಿ ದಾಳಿಗೆ ತುತ್ತಾಗಿದ್ದಾರೆ. ಈ ಪೈಕಿ ಹಳೇ ಮಾರ್ಟಳ್ಳಿ ಗ್ರಾಮದ ನಲ್ಲಸ್ವಾಮಿ, ಮಾಜಿ ಅಧ್ಯಕ್ಷ ಗೋವಿಂದ ಅವರ ತಾಯಿ ಹಾಗೂ ಜೋಸೆಫ್ ಹುಚ್ಚು ನಾಯಿ ದಾಳಿಗೆ ತುತ್ತಾಗಿ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಾರಂಭದಲ್ಲಿ ಒಂದು ನಾಯಿಗೆ ಹುಚ್ಚು ಹಿಡಿದು ಕಚ್ಚಲು ಪ್ರಾರಂಭ ಮಾಡಿದೆ. ಆದಾದ ಬಳಿಕ ನಿರಂತರವಾಗಿ ಜನರ ಮೇಲೆ ದಾಳಿ ಮಾಡುತ್ತಾ ಬಂದಿದೆ. ಮೊದಲು ಕಚ್ಚಿದ್ದ ಹುಚ್ಚುನಾಯಿ ಇತರೆ ನಾಯಿಗಳಿಗೂ ಕಚ್ಚಿರುವ ಸಾಧ್ಯತೆಯಿದ್ದು, ಒಂದು ನಾಯಿಯಿಂದ ಮತ್ತಷ್ಟು ನಾಯಿಗಳು ಹುಚ್ಚು ಹಿಡಿದಂತಾಗಿ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ. ಇದಕ್ಕೆ ಒಂದು ವಾರದ ಅವಧಿಯಲ್ಲಿ ಏಳರಿಂದ ಎಂಟು ಜನರು ಹುಚ್ಚುನಾಯಿ ದಾಳಿಗೆ ತುತ್ತಾಗಿರುವುದೇ ಸಾಕ್ಷಿ.
ಗ್ರಾಮದಲ್ಲಿ ಮೇಲಿಂದ ಮೇಲೆ ಹುಚ್ಚುನಾಯಿಗಳ ಹಾವಳಿ ಮಿತಿ ಮೀರಿರುವುದು ಪೋಷಕರನ್ನು ಆತಂಕಕ್ಕೀಡು ಮಾಡಿದೆ. ಶಾಲೆಗಳ ಆರಂಭವಾದರೆ ಮಕ್ಕಳ ಮೇಲೂ ದಾಳಿ ಮಾಡುವ ಸಾಧ್ಯತೆಯಿದೆ. ರಸ್ತೆಯಲ್ಲಿ ತಿರುಗಾಡುವ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿರುವ ಹುಚ್ಚುನಾಯಿಗಳನ್ನು ಗ್ರಾಮಪಂಚಾಯಿತಿ ಅಧಿಕಾರಿಗಳು ಸೆರೆಹಿಡಿಯಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…
ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…
ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…