ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಹುಚ್ಚುನಾಯಿಗಳ ಹಾವಳಿ ಮಿತಿಮೀರಿದ್ದು ಗ್ರಾಮಸ್ಥರು ಹುಚ್ಚು ನಾಯಿ ದಾಳಿಗೆ ತುತ್ತಾಗಿ ಗಾಯಗೊಳ್ಳುತ್ತಿದ್ದಾರೆ.
ಮಾರ್ಟಳ್ಳಿ, ಹಳೇ ಮಾರ್ಟಳ್ಳಿ, ಸಂದನಪಾಳ್ಯ ಹಾಗೂ ಮೆಟ್ಟುತಿರುವು ಗ್ರಾಮದ ಜನರು ಹುಚ್ಚು ನಾಯಿ ದಾಳಿಗೆ ತುತ್ತಾಗಿದ್ದಾರೆ. ಈ ಪೈಕಿ ಹಳೇ ಮಾರ್ಟಳ್ಳಿ ಗ್ರಾಮದ ನಲ್ಲಸ್ವಾಮಿ, ಮಾಜಿ ಅಧ್ಯಕ್ಷ ಗೋವಿಂದ ಅವರ ತಾಯಿ ಹಾಗೂ ಜೋಸೆಫ್ ಹುಚ್ಚು ನಾಯಿ ದಾಳಿಗೆ ತುತ್ತಾಗಿ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಾರಂಭದಲ್ಲಿ ಒಂದು ನಾಯಿಗೆ ಹುಚ್ಚು ಹಿಡಿದು ಕಚ್ಚಲು ಪ್ರಾರಂಭ ಮಾಡಿದೆ. ಆದಾದ ಬಳಿಕ ನಿರಂತರವಾಗಿ ಜನರ ಮೇಲೆ ದಾಳಿ ಮಾಡುತ್ತಾ ಬಂದಿದೆ. ಮೊದಲು ಕಚ್ಚಿದ್ದ ಹುಚ್ಚುನಾಯಿ ಇತರೆ ನಾಯಿಗಳಿಗೂ ಕಚ್ಚಿರುವ ಸಾಧ್ಯತೆಯಿದ್ದು, ಒಂದು ನಾಯಿಯಿಂದ ಮತ್ತಷ್ಟು ನಾಯಿಗಳು ಹುಚ್ಚು ಹಿಡಿದಂತಾಗಿ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ. ಇದಕ್ಕೆ ಒಂದು ವಾರದ ಅವಧಿಯಲ್ಲಿ ಏಳರಿಂದ ಎಂಟು ಜನರು ಹುಚ್ಚುನಾಯಿ ದಾಳಿಗೆ ತುತ್ತಾಗಿರುವುದೇ ಸಾಕ್ಷಿ.
ಗ್ರಾಮದಲ್ಲಿ ಮೇಲಿಂದ ಮೇಲೆ ಹುಚ್ಚುನಾಯಿಗಳ ಹಾವಳಿ ಮಿತಿ ಮೀರಿರುವುದು ಪೋಷಕರನ್ನು ಆತಂಕಕ್ಕೀಡು ಮಾಡಿದೆ. ಶಾಲೆಗಳ ಆರಂಭವಾದರೆ ಮಕ್ಕಳ ಮೇಲೂ ದಾಳಿ ಮಾಡುವ ಸಾಧ್ಯತೆಯಿದೆ. ರಸ್ತೆಯಲ್ಲಿ ತಿರುಗಾಡುವ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿರುವ ಹುಚ್ಚುನಾಯಿಗಳನ್ನು ಗ್ರಾಮಪಂಚಾಯಿತಿ ಅಧಿಕಾರಿಗಳು ಸೆರೆಹಿಡಿಯಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…