ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಹುಚ್ಚುನಾಯಿಗಳ ಹಾವಳಿ ಮಿತಿಮೀರಿದ್ದು ಗ್ರಾಮಸ್ಥರು ಹುಚ್ಚು ನಾಯಿ ದಾಳಿಗೆ ತುತ್ತಾಗಿ ಗಾಯಗೊಳ್ಳುತ್ತಿದ್ದಾರೆ.
ಮಾರ್ಟಳ್ಳಿ, ಹಳೇ ಮಾರ್ಟಳ್ಳಿ, ಸಂದನಪಾಳ್ಯ ಹಾಗೂ ಮೆಟ್ಟುತಿರುವು ಗ್ರಾಮದ ಜನರು ಹುಚ್ಚು ನಾಯಿ ದಾಳಿಗೆ ತುತ್ತಾಗಿದ್ದಾರೆ. ಈ ಪೈಕಿ ಹಳೇ ಮಾರ್ಟಳ್ಳಿ ಗ್ರಾಮದ ನಲ್ಲಸ್ವಾಮಿ, ಮಾಜಿ ಅಧ್ಯಕ್ಷ ಗೋವಿಂದ ಅವರ ತಾಯಿ ಹಾಗೂ ಜೋಸೆಫ್ ಹುಚ್ಚು ನಾಯಿ ದಾಳಿಗೆ ತುತ್ತಾಗಿ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಾರಂಭದಲ್ಲಿ ಒಂದು ನಾಯಿಗೆ ಹುಚ್ಚು ಹಿಡಿದು ಕಚ್ಚಲು ಪ್ರಾರಂಭ ಮಾಡಿದೆ. ಆದಾದ ಬಳಿಕ ನಿರಂತರವಾಗಿ ಜನರ ಮೇಲೆ ದಾಳಿ ಮಾಡುತ್ತಾ ಬಂದಿದೆ. ಮೊದಲು ಕಚ್ಚಿದ್ದ ಹುಚ್ಚುನಾಯಿ ಇತರೆ ನಾಯಿಗಳಿಗೂ ಕಚ್ಚಿರುವ ಸಾಧ್ಯತೆಯಿದ್ದು, ಒಂದು ನಾಯಿಯಿಂದ ಮತ್ತಷ್ಟು ನಾಯಿಗಳು ಹುಚ್ಚು ಹಿಡಿದಂತಾಗಿ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ. ಇದಕ್ಕೆ ಒಂದು ವಾರದ ಅವಧಿಯಲ್ಲಿ ಏಳರಿಂದ ಎಂಟು ಜನರು ಹುಚ್ಚುನಾಯಿ ದಾಳಿಗೆ ತುತ್ತಾಗಿರುವುದೇ ಸಾಕ್ಷಿ.
ಗ್ರಾಮದಲ್ಲಿ ಮೇಲಿಂದ ಮೇಲೆ ಹುಚ್ಚುನಾಯಿಗಳ ಹಾವಳಿ ಮಿತಿ ಮೀರಿರುವುದು ಪೋಷಕರನ್ನು ಆತಂಕಕ್ಕೀಡು ಮಾಡಿದೆ. ಶಾಲೆಗಳ ಆರಂಭವಾದರೆ ಮಕ್ಕಳ ಮೇಲೂ ದಾಳಿ ಮಾಡುವ ಸಾಧ್ಯತೆಯಿದೆ. ರಸ್ತೆಯಲ್ಲಿ ತಿರುಗಾಡುವ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿರುವ ಹುಚ್ಚುನಾಯಿಗಳನ್ನು ಗ್ರಾಮಪಂಚಾಯಿತಿ ಅಧಿಕಾರಿಗಳು ಸೆರೆಹಿಡಿಯಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…