ಜಿಲ್ಲೆಗಳು

ರೈತರ ಜಮೀನಿಗೆ ಲಗ್ಗೆಯಿಟ್ಟ ಒಂಟಿ ಸಲಗ : ಕಬ್ಬು, ನೆಲಗಡಲೆ, ತೆಂಗು ಬೆಳೆ ನಾಶ

ಹನೂರು: ಒಂಟಿ ಸಲಗವೊಂದು ರೈತರ ಜಮೀನಿಗೆ ಲಗ್ಗೆಯಿಟ್ಟು ಬೆಳೆಯನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಅಜ್ಜಿಪುರ ಹೊರವಲಯದ ಜಮೀನಿನಲ್ಲಿ ನಡೆದಿದೆ.

ಶಿವಶಂಕರ್ ಎಂಬುವರ ಮಾಲೀಕತ್ವದ ಸ.ನಂ.56/2 ಜಮೀನಿನಲ್ಲಿ ಅಜ್ಜಿಪುರ ಗ್ರಾಮದ ನಂಜಪ್ಪ ಸಣ್ಣಮ್ಮ ದಂಪತಿಗಳು ಗುತ್ತಿಗೆ ಆಧಾರದ ಮೇಲೆ ಬೇಸಾಯ ಮಾಡಿಕೊಂಡಿದ್ದ ಜಮೀನಿಗೆ ರಾತ್ರಿ ಲಗ್ಗೆ ಇಟ್ಟಿರುವ ಒಂಟಿ ಸಲಗ ಜಮೀನಿನಲ್ಲಿ ಬೆಳೆಯಲಾಗಿದ್ದ ಕಬ್ಬು, ನೆಲಗಡಲೆ, ತೆಂಗು ಬೆಳೆಯನ್ನು ತಿಂದು ತುಳಿದು ನಾಶಗೊಳಿಸಿರುವುದಲ್ಲದೇ ಜಮೀನಿನಲ್ಲಿ ಅಳವಡಿಸಲಾಗಿದ್ದ ಗುಣಮಟ್ಟದ ತಂತಿಬೇಲಿ ನೀರಿನ ಪರಿಕರಗಳನ್ನು ನಾಶಗೊಳಿಸಿದೆ.
ರೈತರ ಕಣ್ಣೀರು: ಜಮೀನಿನಲ್ಲಿ ಸಾಲಸೋಲ ಮಾಡಿ ಬೆಳೆಯಲಾಗಿದ್ದ ಬೆಳೆಗಳನ್ನು ಕಾಡಾನೆ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ರೈತ ಕುಟುಂಬ ಕಂಗಾಲಾಗಿದೆ.ಈ ಜಮೀನಿಗೆ ನಿರಂತರವಾಗಿ ಒಂಟಿ ಸಲಗ ಪ್ರತಿ ದಿನ ನಿರಂತರವಾಗಿ ದಾಳಿ ನಡೆಸುತ್ತಿದ್ದು ಅರಣ್ಯ ಇಲಾಖೆಯವರು ಸೂಕ್ತ ಕ್ರಮವಹಿಸಿದೆ ಇರುವುದರ ಬಗ್ಗೆ ಆಂದೋಲನದೊಂದಿಗೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಈ ಬಗ್ಗೆ ರೈತನಂಜಪ್ಪ ಮಾತನಾಡಿ, ಕಾಡಾನೆಯು ನಿರಂತರವಾಗಿ ನಮ್ಮ ಜಮೀನಿಗೆ ಬಂದು ಬೆಳೆಗಳನ್ನು ನಾಶ ಮಾಡಿ ಹೋಗುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಅವರಿಗೆ ಸಾಕಷ್ಟು ಬಾರಿ ಮನವಿಯನ್ನು ಸಲ್ಲಿಸಿದ್ದರು ಕೂಡ ಇಲ್ಲಿವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಕಾಡಾನೆ ಬೆಳೆ ನಾಶ ಮಾಡಿರುವುದರಿಂದ ನಾವು ಸಂಕಷ್ಟಕ್ಕೆ ತುತ್ತಾಗಿವೆ. ಹಾಗಾಗಿ ಅರಣ್ಯ ಇಲಾಖೆ ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಪರಿಹಾರವನ್ನು ಒದಗಿಸಬೇಕು. ಕಾಡಾನೆ ಬೆಳೆಗಳನ್ನು ನಾಶ ಮಾಡಿರುವುದಲ್ಲದೆ ನಮ್ಮ ಮೇಲೆ ದಾಳಿ ಮಾಡುವ ಅಪಾಯವನ್ನು ಎದುರಿಸುತ್ತಿದ್ದೇವೆ. ನಮ್ಮ ಮನೆಯ ಹತ್ತಿರದವರೆಗೂ ಕಾಡಾನೆ ಯಾವುದೇ ಭಯವಿಲ್ಲದೆ ಬರುತ್ತಿದ್ದು, ನಾವು ಯಾವುದೇ ಪ್ರತಿರೋಧ ಒಡ್ಡಿದ್ದರು ಜಗ್ಗುವುದಿಲ್ಲ. ಒಂದು ವೇಳೆ ಆನೆಯಿಂದ ಆಸ್ತಿ ಹಾನಿ ಪ್ರಾಣ ಹಾನಿ ಆದರೆ ಇದಕ್ಕೆ ಅರಣ್ಯ ಇಲಾಖೆ ಕಾರಣವಾಗುತ್ತದೆ ಎಂದು ರೈತ ದಂಪತಿಗಳು ಕಣ್ಣೀರಿಟ್ಟಿದ್ದಾರೆ.

andolanait

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

8 hours ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

9 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

10 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

11 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

12 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

12 hours ago