ಜಿಲ್ಲೆಗಳು

ರೈತರ ಜಮೀನಿಗೆ ಲಗ್ಗೆಯಿಟ್ಟ ಒಂಟಿ ಸಲಗ : ಕಬ್ಬು, ನೆಲಗಡಲೆ, ತೆಂಗು ಬೆಳೆ ನಾಶ

ಹನೂರು: ಒಂಟಿ ಸಲಗವೊಂದು ರೈತರ ಜಮೀನಿಗೆ ಲಗ್ಗೆಯಿಟ್ಟು ಬೆಳೆಯನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಅಜ್ಜಿಪುರ ಹೊರವಲಯದ ಜಮೀನಿನಲ್ಲಿ ನಡೆದಿದೆ.

ಶಿವಶಂಕರ್ ಎಂಬುವರ ಮಾಲೀಕತ್ವದ ಸ.ನಂ.56/2 ಜಮೀನಿನಲ್ಲಿ ಅಜ್ಜಿಪುರ ಗ್ರಾಮದ ನಂಜಪ್ಪ ಸಣ್ಣಮ್ಮ ದಂಪತಿಗಳು ಗುತ್ತಿಗೆ ಆಧಾರದ ಮೇಲೆ ಬೇಸಾಯ ಮಾಡಿಕೊಂಡಿದ್ದ ಜಮೀನಿಗೆ ರಾತ್ರಿ ಲಗ್ಗೆ ಇಟ್ಟಿರುವ ಒಂಟಿ ಸಲಗ ಜಮೀನಿನಲ್ಲಿ ಬೆಳೆಯಲಾಗಿದ್ದ ಕಬ್ಬು, ನೆಲಗಡಲೆ, ತೆಂಗು ಬೆಳೆಯನ್ನು ತಿಂದು ತುಳಿದು ನಾಶಗೊಳಿಸಿರುವುದಲ್ಲದೇ ಜಮೀನಿನಲ್ಲಿ ಅಳವಡಿಸಲಾಗಿದ್ದ ಗುಣಮಟ್ಟದ ತಂತಿಬೇಲಿ ನೀರಿನ ಪರಿಕರಗಳನ್ನು ನಾಶಗೊಳಿಸಿದೆ.
ರೈತರ ಕಣ್ಣೀರು: ಜಮೀನಿನಲ್ಲಿ ಸಾಲಸೋಲ ಮಾಡಿ ಬೆಳೆಯಲಾಗಿದ್ದ ಬೆಳೆಗಳನ್ನು ಕಾಡಾನೆ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ರೈತ ಕುಟುಂಬ ಕಂಗಾಲಾಗಿದೆ.ಈ ಜಮೀನಿಗೆ ನಿರಂತರವಾಗಿ ಒಂಟಿ ಸಲಗ ಪ್ರತಿ ದಿನ ನಿರಂತರವಾಗಿ ದಾಳಿ ನಡೆಸುತ್ತಿದ್ದು ಅರಣ್ಯ ಇಲಾಖೆಯವರು ಸೂಕ್ತ ಕ್ರಮವಹಿಸಿದೆ ಇರುವುದರ ಬಗ್ಗೆ ಆಂದೋಲನದೊಂದಿಗೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಈ ಬಗ್ಗೆ ರೈತನಂಜಪ್ಪ ಮಾತನಾಡಿ, ಕಾಡಾನೆಯು ನಿರಂತರವಾಗಿ ನಮ್ಮ ಜಮೀನಿಗೆ ಬಂದು ಬೆಳೆಗಳನ್ನು ನಾಶ ಮಾಡಿ ಹೋಗುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಅವರಿಗೆ ಸಾಕಷ್ಟು ಬಾರಿ ಮನವಿಯನ್ನು ಸಲ್ಲಿಸಿದ್ದರು ಕೂಡ ಇಲ್ಲಿವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಕಾಡಾನೆ ಬೆಳೆ ನಾಶ ಮಾಡಿರುವುದರಿಂದ ನಾವು ಸಂಕಷ್ಟಕ್ಕೆ ತುತ್ತಾಗಿವೆ. ಹಾಗಾಗಿ ಅರಣ್ಯ ಇಲಾಖೆ ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಪರಿಹಾರವನ್ನು ಒದಗಿಸಬೇಕು. ಕಾಡಾನೆ ಬೆಳೆಗಳನ್ನು ನಾಶ ಮಾಡಿರುವುದಲ್ಲದೆ ನಮ್ಮ ಮೇಲೆ ದಾಳಿ ಮಾಡುವ ಅಪಾಯವನ್ನು ಎದುರಿಸುತ್ತಿದ್ದೇವೆ. ನಮ್ಮ ಮನೆಯ ಹತ್ತಿರದವರೆಗೂ ಕಾಡಾನೆ ಯಾವುದೇ ಭಯವಿಲ್ಲದೆ ಬರುತ್ತಿದ್ದು, ನಾವು ಯಾವುದೇ ಪ್ರತಿರೋಧ ಒಡ್ಡಿದ್ದರು ಜಗ್ಗುವುದಿಲ್ಲ. ಒಂದು ವೇಳೆ ಆನೆಯಿಂದ ಆಸ್ತಿ ಹಾನಿ ಪ್ರಾಣ ಹಾನಿ ಆದರೆ ಇದಕ್ಕೆ ಅರಣ್ಯ ಇಲಾಖೆ ಕಾರಣವಾಗುತ್ತದೆ ಎಂದು ರೈತ ದಂಪತಿಗಳು ಕಣ್ಣೀರಿಟ್ಟಿದ್ದಾರೆ.

andolanait

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್‌ ತನ್ನ ಆದೇಶ…

55 mins ago

ನಾನೇ ವೆನಿಜುವೆಲಾ ಹಂಗಾಮಿ ಅಧ್ಯಕ್ಷ: ಡೊನಾಲ್ಡ್‌ ಟ್ರಂಪ್‌ ಘೋಷಣೆ

ಅಮೇರಿಕಾ: ವೆನಿಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೊ ಅವರನ್ನು ಅಮೆರಿಕಾದ ಪಡೆಗಳು ಬಂಧಿಸಿರುವ ಬೆನ್ನಲ್ಲೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು…

1 hour ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ಸಿಬಿಐ ಎದುರು ವಿಚಾರಣೆಗೆ ಹಾಜರಾದ ವಿಜಯ್‌

ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌ ಇಂದು ನವದೆಹಲಿಯಲ್ಲಿ…

1 hour ago

ಇಸ್ರೋಗೆ ಮತ್ತೊಂದು ಮೈಲಿಗಲ್ಲು: ನಭಕ್ಕೆ ಹಾರಿದ ಪಿಎಸ್‌ಎಲ್‌ವಿ ರಾಕೆಟ್‌

ಶ್ರೀಹರಿಕೋಟಾ: ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಪಿಎಸ್‌ಎಲ್‌ವಿ-C62 ರಾಕೆಟ್‌ ಮೂಲಕ EOS-N1 ಅನ್ವೇಷಾ ಸೇರಿದಂತೆ 16 ಉಪಗ್ರಹಗಳನ್ನು ಉಡಾವಣೆ ಮಾಡಿದೆ.…

2 hours ago

ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

3 hours ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ಆತಂಕ

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ…

3 hours ago