ಜಿಲ್ಲೆಗಳು

ರೈತರ ಜಮೀನಿಗೆ ಲಗ್ಗೆಯಿಟ್ಟ ಒಂಟಿ ಸಲಗ : ಕಬ್ಬು, ನೆಲಗಡಲೆ, ತೆಂಗು ಬೆಳೆ ನಾಶ

ಹನೂರು: ಒಂಟಿ ಸಲಗವೊಂದು ರೈತರ ಜಮೀನಿಗೆ ಲಗ್ಗೆಯಿಟ್ಟು ಬೆಳೆಯನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಅಜ್ಜಿಪುರ ಹೊರವಲಯದ ಜಮೀನಿನಲ್ಲಿ ನಡೆದಿದೆ.

ಶಿವಶಂಕರ್ ಎಂಬುವರ ಮಾಲೀಕತ್ವದ ಸ.ನಂ.56/2 ಜಮೀನಿನಲ್ಲಿ ಅಜ್ಜಿಪುರ ಗ್ರಾಮದ ನಂಜಪ್ಪ ಸಣ್ಣಮ್ಮ ದಂಪತಿಗಳು ಗುತ್ತಿಗೆ ಆಧಾರದ ಮೇಲೆ ಬೇಸಾಯ ಮಾಡಿಕೊಂಡಿದ್ದ ಜಮೀನಿಗೆ ರಾತ್ರಿ ಲಗ್ಗೆ ಇಟ್ಟಿರುವ ಒಂಟಿ ಸಲಗ ಜಮೀನಿನಲ್ಲಿ ಬೆಳೆಯಲಾಗಿದ್ದ ಕಬ್ಬು, ನೆಲಗಡಲೆ, ತೆಂಗು ಬೆಳೆಯನ್ನು ತಿಂದು ತುಳಿದು ನಾಶಗೊಳಿಸಿರುವುದಲ್ಲದೇ ಜಮೀನಿನಲ್ಲಿ ಅಳವಡಿಸಲಾಗಿದ್ದ ಗುಣಮಟ್ಟದ ತಂತಿಬೇಲಿ ನೀರಿನ ಪರಿಕರಗಳನ್ನು ನಾಶಗೊಳಿಸಿದೆ.
ರೈತರ ಕಣ್ಣೀರು: ಜಮೀನಿನಲ್ಲಿ ಸಾಲಸೋಲ ಮಾಡಿ ಬೆಳೆಯಲಾಗಿದ್ದ ಬೆಳೆಗಳನ್ನು ಕಾಡಾನೆ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ರೈತ ಕುಟುಂಬ ಕಂಗಾಲಾಗಿದೆ.ಈ ಜಮೀನಿಗೆ ನಿರಂತರವಾಗಿ ಒಂಟಿ ಸಲಗ ಪ್ರತಿ ದಿನ ನಿರಂತರವಾಗಿ ದಾಳಿ ನಡೆಸುತ್ತಿದ್ದು ಅರಣ್ಯ ಇಲಾಖೆಯವರು ಸೂಕ್ತ ಕ್ರಮವಹಿಸಿದೆ ಇರುವುದರ ಬಗ್ಗೆ ಆಂದೋಲನದೊಂದಿಗೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಈ ಬಗ್ಗೆ ರೈತನಂಜಪ್ಪ ಮಾತನಾಡಿ, ಕಾಡಾನೆಯು ನಿರಂತರವಾಗಿ ನಮ್ಮ ಜಮೀನಿಗೆ ಬಂದು ಬೆಳೆಗಳನ್ನು ನಾಶ ಮಾಡಿ ಹೋಗುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಅವರಿಗೆ ಸಾಕಷ್ಟು ಬಾರಿ ಮನವಿಯನ್ನು ಸಲ್ಲಿಸಿದ್ದರು ಕೂಡ ಇಲ್ಲಿವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಕಾಡಾನೆ ಬೆಳೆ ನಾಶ ಮಾಡಿರುವುದರಿಂದ ನಾವು ಸಂಕಷ್ಟಕ್ಕೆ ತುತ್ತಾಗಿವೆ. ಹಾಗಾಗಿ ಅರಣ್ಯ ಇಲಾಖೆ ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಪರಿಹಾರವನ್ನು ಒದಗಿಸಬೇಕು. ಕಾಡಾನೆ ಬೆಳೆಗಳನ್ನು ನಾಶ ಮಾಡಿರುವುದಲ್ಲದೆ ನಮ್ಮ ಮೇಲೆ ದಾಳಿ ಮಾಡುವ ಅಪಾಯವನ್ನು ಎದುರಿಸುತ್ತಿದ್ದೇವೆ. ನಮ್ಮ ಮನೆಯ ಹತ್ತಿರದವರೆಗೂ ಕಾಡಾನೆ ಯಾವುದೇ ಭಯವಿಲ್ಲದೆ ಬರುತ್ತಿದ್ದು, ನಾವು ಯಾವುದೇ ಪ್ರತಿರೋಧ ಒಡ್ಡಿದ್ದರು ಜಗ್ಗುವುದಿಲ್ಲ. ಒಂದು ವೇಳೆ ಆನೆಯಿಂದ ಆಸ್ತಿ ಹಾನಿ ಪ್ರಾಣ ಹಾನಿ ಆದರೆ ಇದಕ್ಕೆ ಅರಣ್ಯ ಇಲಾಖೆ ಕಾರಣವಾಗುತ್ತದೆ ಎಂದು ರೈತ ದಂಪತಿಗಳು ಕಣ್ಣೀರಿಟ್ಟಿದ್ದಾರೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

18 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

18 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

18 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

18 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

18 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

18 hours ago