ಜಿಲ್ಲೆಗಳು

ಹನೂರು : 24 ವರ್ಷ ದಿನಗೂಲಿ ನೌಕರರಾಗಿ ಕಾರ್ಯನಿರ್ವಹಿಸಿದ್ದ ಮಹದೇವ್ ಶೆಟ್ಟಿ ಅವರಿಗೆ ಬೀಳ್ಕೊಡುಗೆ

ಹನೂರು: ಕಳೆದ 24 ವರ್ಷಗಳಿಂದ ದಿನಗೂಲಿ ನೌಕರರಾಗಿ ಕಾರ್ಯ ನಿರ್ವಹಿಸಿದ ಮಹದೇವ್ ಶೆಟ್ಟಿ ರವರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಕುಮಾರ್ ಮಾತನಾಡಿ ಮಹದೇವಶೆಟ್ಟಿ ರವರು ಪಟ್ಟಣ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ 24 ವರ್ಷಗಳ ಸತತ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಇವರು ಸೇವೆ ಅವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಮಳೆಯಿಲ್ಲದೆ ತೀವ್ರ ಬರಗಾಲ ಬಂದ ಸಂದರ್ಭದಲ್ಲಿ ಪಟ್ಟಣದ ಜನತೆಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ .ಇವರ ಸೇವೆಯನ್ನು ಗುರುತಿಸಿ ಸನ್ಮಾನಿಸುವುದು ನಮ್ಮೆಲ್ಲರ ಕರ್ತವ್ಯ,ಇದಲ್ಲದೆ ಪಟ್ಟಣ ಅಭಿವೃದ್ಧಿಯಾಗಬೇಕಾದರೆ ಪಟ್ಟಣ ಪಂಚಾಯಿತಿ ಪೌರಕಾರ್ಮಿಕರು, ನೀರುಗಂಟಿಗಳು ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.
ಮುಖ್ಯಾಧಿಕಾರಿ ಮೂರ್ತಿ ಮಾತನಾಡಿ ಮಹದೇವಶೆಟ್ಟಿ ರವರು ನಿವೃತ್ತಿ ಜೀವನ ಸುಖಕರವಾಗಿರಲಿ.ಅವರು ದಿನಗೂಲಿ ನೌಕರರಾಗಿದ್ದರು ಸಹ ಕಾಯಂ ನೌಕರರಂತೆ ಕರ್ತವ್ಯ ನಿರ್ವಹಿಸಿದ್ದಾರೆ.ಅವರಿಗೆ ಕೊಟ್ಟಂತಹ ನೀರುಗಂಟಿ ,ಬಸ್ ನಿಲ್ದಾಣದ ಸುಂಕ ವಸೂಲಾತಿ ಸೇರಿದಂತೆ ವಿವಿಧ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಮ್ಮ’ ಸದಸ್ಯರಾದ ಸುದೇಶ್,ಮಹೇಶ್ ನಾಯ್ಕ,ಪುಟ್ಟರಾಜು ಆರೋಗ್ಯ ನಿರೀಕ್ಷಕ ಬಾಲಸುಬ್ರಹ್ಮಣ್ಯ ಸಿಬ್ಬಂದಿಗಳಾದ ದೇವಿಕಾ ಮಂಜುನಾಥ, ಪ್ರತಾಪ್,ಮದನ್ ಶರತ್ ,ನಾಗೇಂದ್ರ, ರಾಕೇಶ್ ಸುರೇಶ್, ರಾಜೇಂದ್ರ,ಶ್ರೀನಿವಾಸ್ ಸುಷ್ಮಾ ಸೇರಿದಂತೆ ನೀರುಗಂಟಿಗಳು ಹಾಜರಿದ್ದರು

andolanait

Recent Posts

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

2 mins ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

4 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

9 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

36 mins ago

ಪಡಿತರ ವಿತರಣೆ | ಸಮಯ ಬದಲಾವಣೆ

ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…

1 hour ago

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

11 hours ago