ಹನೂರು: ಅಮಾಯಕರ ಮೇಲೆ ಹಲ್ಲೆ ಮಾಡಿ ಅವರಿಗೆ ಮಾನಸಿಕವಾಗಿ ಹಿಂಸೆ ನೀಡಿರುವ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ವನ್ನಿಕುಲ ಕ್ಷತ್ರಿಯ ಜಿಲ್ಲಾಧ್ಯಕ್ಷ ಪೆದ್ದನಪಾಳ್ಯ ಮಣಿ ಆಗ್ರಹಿಸಿದರು.
ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆ ಅಧಿಕಾರಿಗಳು ಕಾಡಂಚಿನ ಗ್ರಾಮಗಳ ಜನರನ್ನು ಅತ್ಯಂತ ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದ್ದಾರೆ. ಇವರ ಕಿರುಕುಳದಿಂದಾಗಿ ಜನರು ದಿನನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಯಾವುದೇ ತಪ್ಪು ಮಾಡದ ಅಮಾಯಕರನ್ನು ಜಾತಿನಿಂದನೆ ಮಾಡುವುದರ ಜತೆಗೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಇವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದರು.
ಇದೇ ವೇಳೆ ಡಿಎಫ್ ಒ ಹಲ್ಲೆಗೊಳಗಾಗಿದ್ದ ಮಾದೇಶ್ ಮಾತನಾಡಿ ನಾಲ್ ರೋಡ್ ಬಳಿಯ ಹಳ್ಳದಲ್ಲಿ ಸ್ನಾನ ಮಾಡಿಕೊಂಡು ಬರುತ್ತಿದ್ದಾಗ ಡಿಎಫ್ ಓ ಸಂತೋಷ್ ಕುಮಾರ್, ಆರ್ ಎಫ್ ಓ ಗಿರಿಧರ್ ಹಾಗೂ ಸುಂದರ್ ಅವರುಗಳು ಎರಡು ಜೀಪಿನಲ್ಲಿ 10 ಕ್ಕೂ ಹೆಚ್ಚು ಜನರು ಬಂದು ನಮ್ಮನ್ನು ಹೆದರಿಸಿದ್ದಾರೆ. ಬಳಿಕ ಆರ್ ಎಫ್ ಓ ಗಿರಿಧರ್ ನನ್ನ ಕೈಹಿಡಿದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೇ ಮೀನು ಹಿಡಿಯಲು ಹೋಗಿದ್ದೀಯಾ ಎಂದು ಎಡಗಾಲಿಗೆ ಹಾಗೂ ದೇಹದ ಇತರೆ ಭಾಗಗಳಿಗೆ ದೊಣ್ಣೆಯಿಂದ ಹೊಡೆದು ದೌರ್ಜನ್ಯವೆಸಗಿದ್ದಾರೆ.
ಸಮೀಪದಲ್ಲೇ ಇದ್ದ ಡಿಎಫ್ ಓ. ಸಂತೋಷ್ ಕುಮಾರ್ ಸಹ ನನಗೆ ಹಾಗೂ ಮಣಿಯವರಿಗೆ ದೊಣ್ಣೆಯಿಂದ ಹೊಡೆದು ಹಲ್ಲೆ ಮಾಡುವುದರ ಜತೆಗೆ ಜಾತಿನಿಂದನೆ ಮಾಡಿದ್ದಾರೆ. ಅಲ್ಲದೇ ನಮ್ಮನ್ನು ನಾಲ್ ರೋಡ್ ಕ್ಯಾಂಪ್ ಗೆ ಕರೆತಂದು ಬಳಿಕ ಹೂಗ್ಯಂ ಅರಣ್ಯ ಇಲಾಖೆ ಕಚೇರಿಗೆ ಕರೆದೊಯ್ದರು. ಅಂದು ರಾತ್ರಿ ಪೂರ್ತಿ ಕಚೇರಿಯಲ್ಲೇ ಇರಿಸಿ ಮಾರನೇ ದಿನ ಹನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದರು. ಅರಣ್ಯಾಧಿಕಾರಿಗಳು ನಮಗೆ ತೀವ್ರವಾಗಿ ಹಲ್ಲೆ ಮಾಡಿದ್ದಾರೆ ಎಂದು ಮನವಿ ಮಾಡಿಕೊಂಡರು ವೈದ್ಯಾಧಿಕಾರಿಗಳಿಗೆ ತಿಳಿಸಿ ನಮ್ಮ ಹೇಳಿಕೆ ದಾಖಲು ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡರೂ ವೈದ್ಯರು ನಮಗೆ ಸ್ಪಂದಿಸಿಲ್ಲ ಎಂದು ಆರೋಪಿಸಿದರು.
ಬಳಿಕ ನಮ್ಮನ್ನು ಯಳಂದೂರಿನ ನ್ಯಾಯಧೀಶರ ಮುಂದೆ ಹಾಜರು ಪಡಿಸಿದಾಗ ನಡೆದ ಘಟನೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದ್ದೇವೆ. ಅರಣ್ಯಾಧಿಕಾರಿಗಳ ಹಿಂಸೆಯಿಂದ ತೀವ್ರವಾಗೊ ಜರ್ಜರಿತಗೊಂಡಿದ್ದೇವೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಪ್ರಧಾನ ಅರಣ್ಯ ಮುಖ್ಯ ಸಂರಕ್ಷಾಧಿಕಾರಿ ಅವರಿಗೂ ದೂರು ಸಲ್ಲಿಸಿದ್ದೇವೆ. ಯಾವುದೇ ತಪ್ಪು ಮಾಡದೇ ಇರುವ ನಮ್ಮನ್ನು ಅಮಾನುಷವಾಗಿ ನಡೆಸಿಕೊಂಡಿರುವ ಡಿಎಫ್ಓ ಸಂತೋಷ್ ಕುಮಾರ್ ಆರ್ ಎಫ್ ಓ ಗಳಾದ ಗಿರಿಧರ್ ಹಗೂ ಸುಂದರ್ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಸಂತ್ರಸ್ತ ಮಾದೇಶ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಿ,ಸದಸ್ಯರಾದ ಪೌಲ್ ರಾಜ್ ಮಾಜಿ ಸದಸ್ಯ ಸಮನ್ಸ್ ನಾದನ್ ,ಮುಖಂಡರುಗಳಾದ ಕಂದಸ್ವಾಮಿ ಮಾನವ ಹಕ್ಕುಗಳ ಆಯೋಗದ ಸದಸ್ಯ ನಾಗರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…