ಜಿಲ್ಲೆಗಳು

ಅರಣ್ಯಾಧಿಕಾರಿಗಳಿಂದ ಕಾಡಂಚಿನ ಗ್ರಾಮಸ್ಥರಿಗೆ ಕಿರುಕುಳದ ಆರೋಪ : ಸೇವೆಯಿಂದ ಅಮಾನತುಗೊಳಿಸಲು ಒತ್ತಾಯ

ಹನೂರು: ಅಮಾಯಕರ ಮೇಲೆ ಹಲ್ಲೆ ಮಾಡಿ ಅವರಿಗೆ ಮಾನಸಿಕವಾಗಿ ಹಿಂಸೆ ನೀಡಿರುವ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ವನ್ನಿಕುಲ ಕ್ಷತ್ರಿಯ ಜಿಲ್ಲಾಧ್ಯಕ್ಷ ಪೆದ್ದನಪಾಳ್ಯ ಮಣಿ ಆಗ್ರಹಿಸಿದರು.

ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆ ಅಧಿಕಾರಿಗಳು ಕಾಡಂಚಿನ ಗ್ರಾಮಗಳ ಜನರನ್ನು ಅತ್ಯಂತ ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದ್ದಾರೆ. ಇವರ ಕಿರುಕುಳದಿಂದಾಗಿ ಜನರು ದಿನನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಯಾವುದೇ ತಪ್ಪು ಮಾಡದ ಅಮಾಯಕರನ್ನು ಜಾತಿನಿಂದನೆ ಮಾಡುವುದರ ಜತೆಗೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಇವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದರು.
ಮಾರ್ಟಳ್ಳಿ ಗ್ರಾಮಪಂಚಾಯಿತಿ ಉಪಾಧ್ಯಕ್ಷ ರಾಮಲಿಂಗಂ ಮಾತನಾಡಿ, ಗ್ರಾಮದಲ್ಲಿನ ಜನರು ಅರಣ್ಯ ಇಲಾಖೆ ಕಿರುಕುಳದಿಂದಾಗಿ ಬೇಸತ್ತಿದ್ದಾರೆ. ಮಣಿ ಮತ್ತು ಮಾದೇಶ್ ಮೇಲೆ ನಡೆದಿರುವ ಹಲ್ಲೆ ಘಟನೆ ಮಾತ್ರ ಬೆಳಕಿಗೆ ಬಂದಿದೆ. ಬೆಳಕಿಗೆ ಬರದಂತ ಇಂಥ ಘಟನೆಗಳು ಸಾಕಷ್ಟು ನಡೆದಿವೆ. ಕೂಡಲೇ ಇಂಥ ಪ್ರಕರಣಗಳು ನಿಲ್ಲಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಡಿಎಫ್ ಒ ಹಲ್ಲೆಗೊಳಗಾಗಿದ್ದ ಮಾದೇಶ್ ಮಾತನಾಡಿ ನಾಲ್ ರೋಡ್ ಬಳಿಯ ಹಳ್ಳದಲ್ಲಿ ಸ್ನಾನ ಮಾಡಿಕೊಂಡು ಬರುತ್ತಿದ್ದಾಗ ಡಿಎಫ್ ಓ ಸಂತೋಷ್ ಕುಮಾರ್, ಆರ್ ಎಫ್ ಓ ಗಿರಿಧರ್ ಹಾಗೂ ಸುಂದರ್ ಅವರುಗಳು ಎರಡು ಜೀಪಿನಲ್ಲಿ 10 ಕ್ಕೂ ಹೆಚ್ಚು ಜನರು ಬಂದು ನಮ್ಮನ್ನು ಹೆದರಿಸಿದ್ದಾರೆ. ಬಳಿಕ ಆರ್ ಎಫ್ ಓ ಗಿರಿಧರ್ ನನ್ನ ಕೈಹಿಡಿದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೇ ಮೀನು ಹಿಡಿಯಲು ಹೋಗಿದ್ದೀಯಾ ಎಂದು ಎಡಗಾಲಿಗೆ ಹಾಗೂ ದೇಹದ ಇತರೆ ಭಾಗಗಳಿಗೆ ದೊಣ್ಣೆಯಿಂದ ಹೊಡೆದು ದೌರ್ಜನ್ಯವೆಸಗಿದ್ದಾರೆ.

ಸಮೀಪದಲ್ಲೇ ಇದ್ದ ಡಿಎಫ್ ಓ. ಸಂತೋಷ್ ಕುಮಾರ್ ಸಹ ನನಗೆ ಹಾಗೂ ಮಣಿಯವರಿಗೆ ದೊಣ್ಣೆಯಿಂದ ಹೊಡೆದು ಹಲ್ಲೆ ಮಾಡುವುದರ ಜತೆಗೆ ಜಾತಿನಿಂದನೆ ಮಾಡಿದ್ದಾರೆ. ಅಲ್ಲದೇ ನಮ್ಮನ್ನು ನಾಲ್ ರೋಡ್ ಕ್ಯಾಂಪ್ ಗೆ ಕರೆತಂದು ಬಳಿಕ ಹೂಗ್ಯಂ ಅರಣ್ಯ ಇಲಾಖೆ ಕಚೇರಿಗೆ ಕರೆದೊಯ್ದರು. ಅಂದು ರಾತ್ರಿ ಪೂರ್ತಿ ಕಚೇರಿಯಲ್ಲೇ ಇರಿಸಿ ಮಾರನೇ ದಿನ ಹನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದರು. ಅರಣ್ಯಾಧಿಕಾರಿಗಳು ನಮಗೆ ತೀವ್ರವಾಗಿ ಹಲ್ಲೆ ಮಾಡಿದ್ದಾರೆ ಎಂದು ಮನವಿ ಮಾಡಿಕೊಂಡರು ವೈದ್ಯಾಧಿಕಾರಿಗಳಿಗೆ ತಿಳಿಸಿ ನಮ್ಮ ಹೇಳಿಕೆ ದಾಖಲು ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡರೂ ವೈದ್ಯರು ನಮಗೆ ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಬಳಿಕ ನಮ್ಮನ್ನು ಯಳಂದೂರಿನ ನ್ಯಾಯಧೀಶರ ಮುಂದೆ ಹಾಜರು ಪಡಿಸಿದಾಗ ನಡೆದ ಘಟನೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದ್ದೇವೆ. ಅರಣ್ಯಾಧಿಕಾರಿಗಳ ಹಿಂಸೆಯಿಂದ ತೀವ್ರವಾಗೊ ಜರ್ಜರಿತಗೊಂಡಿದ್ದೇವೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಪ್ರಧಾನ ಅರಣ್ಯ ಮುಖ್ಯ ಸಂರಕ್ಷಾಧಿಕಾರಿ ಅವರಿಗೂ ದೂರು ಸಲ್ಲಿಸಿದ್ದೇವೆ. ಯಾವುದೇ ತಪ್ಪು ಮಾಡದೇ ಇರುವ ನಮ್ಮನ್ನು ಅಮಾನುಷವಾಗಿ ನಡೆಸಿಕೊಂಡಿರುವ ಡಿಎಫ್ಓ ಸಂತೋಷ್ ಕುಮಾರ್ ಆರ್ ಎಫ್ ಓ ಗಳಾದ ಗಿರಿಧರ್ ಹಗೂ ಸುಂದರ್ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಸಂತ್ರಸ್ತ ಮಾದೇಶ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಿ,ಸದಸ್ಯರಾದ ಪೌಲ್ ರಾಜ್ ಮಾಜಿ ಸದಸ್ಯ ಸಮನ್ಸ್ ನಾದನ್ ,ಮುಖಂಡರುಗಳಾದ ಕಂದಸ್ವಾಮಿ ಮಾನವ ಹಕ್ಕುಗಳ ಆಯೋಗದ ಸದಸ್ಯ ನಾಗರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

6 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

19 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

20 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

20 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

20 hours ago