ಜಿಲ್ಲೆಗಳು

ಹನೂರು : ಗ್ರಾ.ಪಂ ನೂತನ ಅಧ್ಯಕ್ಷರಾಗಿ ಕಲಾವತಿ ಮಾದೇಶ್ ಅವಿರೋಧ ಆಯ್ಕೆ

ಹನೂರು : ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಲಾವತಿ ಮಾದೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನಂಜುಂಡಸ್ವಾಮಿ ರವರು ರಾಜೀನಾಮೆ ನೀಡಿದ್ದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಇಂದು ಅಧ್ಯಕ್ಷರ ಚುನಾವಣೆ ನಡೆಯಿತು. ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ 10, ಪಕ್ಷೇತರ ಇಬ್ಬರು ಹಾಗೂ ಬಿಜೆಪಿ ಬೆಂಬಲಿತ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿದ್ದರು.

30 ತಿಂಗಳ ಅಧ್ಯಕ್ಷಗಾದಿಗೆ ಕಾಂಗ್ರೆಸ್ ಪಕ್ಷದ ವರಿಷ್ಠರ ಸಮ್ಮತಿಯ ಮೇರೆಗೆ ಮೊದಲ 10 ತಿಂಗಳಿಗೆ ಚಿಕ್ಕಮಾಲಾಪುರ ಗ್ರಾಮದಿಂದ ಆಯ್ಕೆಯಾಗಿದ್ದ ಅಶೋಕ್, ನಂತರದ ಹತ್ತು ತಿಂಗಳಿಗೆ ಬೆಳತ್ತೂರು ಗ್ರಾಮದ ನಂಜುಂಡಸ್ವಾಮಿ ಆಯ್ಕೆಯಾಗಿದ್ದರು ಇದೀಗ ಕೊನೆಯ10 ತಿಂಗಳಿಗೆ ಕಂಡಯ್ಯನ ಪಾಳ್ಯ ಗ್ರಾಮದಿಂದ ಆಯ್ಕೆಯಾಗಿದ್ದ ಕಲಾವತಿ ಮಾದೇಶ್ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಲಾವತಿ ಮಾದೇಶ್ ಹೊರತು ಪಡಿಸಿ ಇನ್ಯಾರು ಅರ್ಜಿ ಸಲ್ಲಿಸದ ಹಿನ್ನೆಲೆ ಚುನಾವಣಾ ಅಧಿಕಾರಿಯಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕಲಾವತಿ ಮಾದೇಶ ರವರನ್ನ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು.

ಕಾಂಗ್ರೆಸ್ ಬೆಂಬಲಿತ ಸದಸ್ಯರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಈ ವೇಳೆ ಗ್ರಾಪಂ ಉಪಾಧ್ಯಕ್ಷ ಮಹದೇವಮ್ಮ, ಸದಸ್ಯರುಗಳಾದ ಪುಷ್ಪಾವತಿ,ರಾಜಮಣಿ ,ನಾಗಣ್ಣ, ಪ್ರಭುಸ್ವಾಮಿ, ರಾಜಿ ಬಾಯಿ, ಚೆನ್ನಪ್ಪ, ಮಲ್ಲೇಶ್, ನಂಜುಂಡಸ್ವಾಮಿ, ಅಶೋಕ್, ಮುಖಂಡರುಗಳಾದ ವೆಂಕಟೇಶ್, ನಂಜುಂಡ ಶೆಟ್ಟಿ, ಕಂಡಯ್ಯನ ಪಾಳ್ಯ ಮಾದೇಶ್, ಉದ್ದನೂರು ಸಿದ್ದರಾಜು, ರುದ್ರಪ್ಪ, ಶಿವಣ್ಣ,ವೇಲು ಸ್ವಾಮಿ, ಮಲ್ಲು ಸ್ವಾಮಿ, ಅಂಕರಾಜು ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಸಾರ್ವಜನಿಕ ಶೌಚಾಲಯಗಳ ಬೀಗ ತೆರವು

ಮೈಸೂರಿನ ಮೆಟ್ರೋಪೋಲ್ ವೃತ್ತದ ಸಮೀಪ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ…

29 mins ago

ಓದುಗರ ಪತ್ರ: ಬಾಂಬ್ ಬೆದರಿಕೆ: ಕಠಿಣ ಶಿಕ್ಷೆ ನೀಡಿ

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು, ನ್ಯಾಯಾಲಯ ಮೊದಲಾದ ಕಡೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಫೋನ್, ಇ-ಮೇಲ್ ಮೂಲಕ ಬೆದರಿಕೆ…

31 mins ago

ಓದುಗರ ಪತ್ರ: ದಾಖಲೆ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ…

33 mins ago

ಕಕ್ಕೆಹೊಳೆ, ಗಾಂಧಿ ವೃತ್ತದಲ್ಲಿ ಕ್ಯಾಮೆರಾ ಕಾರ್ಯಾರಂಭ

ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ…

38 mins ago

ರಸ್ತೆಗಳು ಗುಂಡಿಮಯ; ಸಂಚಾರ ಅಯೋಮಯ

ಪ್ರಶಾಂತ್ ಎಸ್. ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ. ಗಂಗೋತ್ರಿ…

43 mins ago

‘ಶಾಲೆಗೆ ಹೋಗಲು ವಾಹನ ವ್ಯವಸ್ಥೆ ಮಾಡಿಕೊಡಿ’

ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ…

48 mins ago