ಜಿಲ್ಲೆಗಳು

ಹನೂರು : ಗ್ರಾ.ಪಂ ನೂತನ ಅಧ್ಯಕ್ಷರಾಗಿ ಕಲಾವತಿ ಮಾದೇಶ್ ಅವಿರೋಧ ಆಯ್ಕೆ

ಹನೂರು : ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಲಾವತಿ ಮಾದೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನಂಜುಂಡಸ್ವಾಮಿ ರವರು ರಾಜೀನಾಮೆ ನೀಡಿದ್ದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಇಂದು ಅಧ್ಯಕ್ಷರ ಚುನಾವಣೆ ನಡೆಯಿತು. ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ 10, ಪಕ್ಷೇತರ ಇಬ್ಬರು ಹಾಗೂ ಬಿಜೆಪಿ ಬೆಂಬಲಿತ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿದ್ದರು.

30 ತಿಂಗಳ ಅಧ್ಯಕ್ಷಗಾದಿಗೆ ಕಾಂಗ್ರೆಸ್ ಪಕ್ಷದ ವರಿಷ್ಠರ ಸಮ್ಮತಿಯ ಮೇರೆಗೆ ಮೊದಲ 10 ತಿಂಗಳಿಗೆ ಚಿಕ್ಕಮಾಲಾಪುರ ಗ್ರಾಮದಿಂದ ಆಯ್ಕೆಯಾಗಿದ್ದ ಅಶೋಕ್, ನಂತರದ ಹತ್ತು ತಿಂಗಳಿಗೆ ಬೆಳತ್ತೂರು ಗ್ರಾಮದ ನಂಜುಂಡಸ್ವಾಮಿ ಆಯ್ಕೆಯಾಗಿದ್ದರು ಇದೀಗ ಕೊನೆಯ10 ತಿಂಗಳಿಗೆ ಕಂಡಯ್ಯನ ಪಾಳ್ಯ ಗ್ರಾಮದಿಂದ ಆಯ್ಕೆಯಾಗಿದ್ದ ಕಲಾವತಿ ಮಾದೇಶ್ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಲಾವತಿ ಮಾದೇಶ್ ಹೊರತು ಪಡಿಸಿ ಇನ್ಯಾರು ಅರ್ಜಿ ಸಲ್ಲಿಸದ ಹಿನ್ನೆಲೆ ಚುನಾವಣಾ ಅಧಿಕಾರಿಯಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕಲಾವತಿ ಮಾದೇಶ ರವರನ್ನ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು.

ಕಾಂಗ್ರೆಸ್ ಬೆಂಬಲಿತ ಸದಸ್ಯರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಈ ವೇಳೆ ಗ್ರಾಪಂ ಉಪಾಧ್ಯಕ್ಷ ಮಹದೇವಮ್ಮ, ಸದಸ್ಯರುಗಳಾದ ಪುಷ್ಪಾವತಿ,ರಾಜಮಣಿ ,ನಾಗಣ್ಣ, ಪ್ರಭುಸ್ವಾಮಿ, ರಾಜಿ ಬಾಯಿ, ಚೆನ್ನಪ್ಪ, ಮಲ್ಲೇಶ್, ನಂಜುಂಡಸ್ವಾಮಿ, ಅಶೋಕ್, ಮುಖಂಡರುಗಳಾದ ವೆಂಕಟೇಶ್, ನಂಜುಂಡ ಶೆಟ್ಟಿ, ಕಂಡಯ್ಯನ ಪಾಳ್ಯ ಮಾದೇಶ್, ಉದ್ದನೂರು ಸಿದ್ದರಾಜು, ರುದ್ರಪ್ಪ, ಶಿವಣ್ಣ,ವೇಲು ಸ್ವಾಮಿ, ಮಲ್ಲು ಸ್ವಾಮಿ, ಅಂಕರಾಜು ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.

andolanait

Recent Posts

ಹನೂರು: ಕಾಡಾನೆ ದಾಳಿಗೆ ಸಿಲುಕಿ ರೈತನ ಕಾಲು ಮುರಿತ

ಮಹಾದೇಶ್‌ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ…

2 hours ago

ಮೊದಲು ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ…

2 hours ago

ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ…

2 hours ago

ಅರಣ್ಯ ಪ್ರದೇಶದ ಹೊರಗಡೆ ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ…

2 hours ago

ಮೈಸೂರು ವಿವಿ 106ನೇ ಘಟಿಕೋತ್ಸವ ಸಂಭ್ರಮ: 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್‌ ಹಾಲ್‌ನಲ್ಲಿ ನೆರವೇರಿತು. ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ…

3 hours ago

ಬಳ್ಳಾರಿ ಗಲಾಟೆ ಪ್ರಕರಣ: ಮೃತ ರಾಜಶೇಖರ್‌ಗೆ 2 ಬಾರಿ ಮರಣೋತ್ತರ ಪರೀಕ್ಷೆ ಯಾಕೆ?: ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು…

3 hours ago