ಹನೂರು : ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಲಾವತಿ ಮಾದೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನಂಜುಂಡಸ್ವಾಮಿ ರವರು ರಾಜೀನಾಮೆ ನೀಡಿದ್ದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಇಂದು ಅಧ್ಯಕ್ಷರ ಚುನಾವಣೆ ನಡೆಯಿತು. ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ 10, ಪಕ್ಷೇತರ ಇಬ್ಬರು ಹಾಗೂ ಬಿಜೆಪಿ ಬೆಂಬಲಿತ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿದ್ದರು.
30 ತಿಂಗಳ ಅಧ್ಯಕ್ಷಗಾದಿಗೆ ಕಾಂಗ್ರೆಸ್ ಪಕ್ಷದ ವರಿಷ್ಠರ ಸಮ್ಮತಿಯ ಮೇರೆಗೆ ಮೊದಲ 10 ತಿಂಗಳಿಗೆ ಚಿಕ್ಕಮಾಲಾಪುರ ಗ್ರಾಮದಿಂದ ಆಯ್ಕೆಯಾಗಿದ್ದ ಅಶೋಕ್, ನಂತರದ ಹತ್ತು ತಿಂಗಳಿಗೆ ಬೆಳತ್ತೂರು ಗ್ರಾಮದ ನಂಜುಂಡಸ್ವಾಮಿ ಆಯ್ಕೆಯಾಗಿದ್ದರು ಇದೀಗ ಕೊನೆಯ10 ತಿಂಗಳಿಗೆ ಕಂಡಯ್ಯನ ಪಾಳ್ಯ ಗ್ರಾಮದಿಂದ ಆಯ್ಕೆಯಾಗಿದ್ದ ಕಲಾವತಿ ಮಾದೇಶ್ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಲಾವತಿ ಮಾದೇಶ್ ಹೊರತು ಪಡಿಸಿ ಇನ್ಯಾರು ಅರ್ಜಿ ಸಲ್ಲಿಸದ ಹಿನ್ನೆಲೆ ಚುನಾವಣಾ ಅಧಿಕಾರಿಯಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕಲಾವತಿ ಮಾದೇಶ ರವರನ್ನ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು.
ಕಾಂಗ್ರೆಸ್ ಬೆಂಬಲಿತ ಸದಸ್ಯರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಈ ವೇಳೆ ಗ್ರಾಪಂ ಉಪಾಧ್ಯಕ್ಷ ಮಹದೇವಮ್ಮ, ಸದಸ್ಯರುಗಳಾದ ಪುಷ್ಪಾವತಿ,ರಾಜಮಣಿ ,ನಾಗಣ್ಣ, ಪ್ರಭುಸ್ವಾಮಿ, ರಾಜಿ ಬಾಯಿ, ಚೆನ್ನಪ್ಪ, ಮಲ್ಲೇಶ್, ನಂಜುಂಡಸ್ವಾಮಿ, ಅಶೋಕ್, ಮುಖಂಡರುಗಳಾದ ವೆಂಕಟೇಶ್, ನಂಜುಂಡ ಶೆಟ್ಟಿ, ಕಂಡಯ್ಯನ ಪಾಳ್ಯ ಮಾದೇಶ್, ಉದ್ದನೂರು ಸಿದ್ದರಾಜು, ರುದ್ರಪ್ಪ, ಶಿವಣ್ಣ,ವೇಲು ಸ್ವಾಮಿ, ಮಲ್ಲು ಸ್ವಾಮಿ, ಅಂಕರಾಜು ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…