ಜಿಲ್ಲೆಗಳು

ಹನೂರು : ಮೃತ ಹರದನಹಳ್ಳಿ ರೆಹಮಾನ್ ಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ

ಹನೂರು: ಸುದ್ದಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಹರದನಹಳ್ಳಿ ರೆಹಮಾನ್ ಅವರ ಅಕಾಲಿಕ ನಿಧನದಿಂದ ಪತ್ರಿಕಾರಂಗ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ. ಮಹಾದೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪತ್ರಕರ್ತ ರೆಹಮಾನ್ ಅವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೆಹಮಾನ್ ಅವರು ಪತ್ರಿಕ ರಂಗಕ್ಕೆ ತಮ್ಮ ಜೀವವನ್ನು ಮುಡುಪಾಗಿಟ್ಟಿದ್ದರು. ಸಮಾಜಮುಖಿ ಕಳಕಳಿಯ ಸುದ್ದಿಗಳನ್ನು ಪ್ರಕಟಿಸುವಲ್ಲಿ ನಿಸ್ಸಿಮರಾಗಿದ್ದ ಅವರು ಸ್ನೇಹಜೀವಿಯಾಗಿದ್ದರು. ಹನೂರು ಭಾಗಕ್ಕೆ ಹಲವಾರು ಬಾರಿ ಸುದ್ದಿಗಾಗಿ ಬಂದಿದ್ದಾರೆ. ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ ಸೇರಿದಂತೆ ಅನೇಕ ಸಮಾಜಮುಖಿ ವರದಿಗಳನ್ನು ಬಿತ್ತರಿಸಿದ್ದಾರೆ ಎಂದು ಸ್ಮರಿಸಿದ ಅವರು ಪತ್ರಕರ್ತ ರೆಹಮಾನ್ ಕುಟುಂಬಕ್ಕೆ ನೋವು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದರು.

ಇದೇ ವೇಳೆ ಪತ್ರಿಕಾಗೋಷ್ಠಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಣಗಳ್ಳಿ ಬಸವರಾಜು ಮಾತನಾಡಿ, ಪತ್ರಕರ್ತ ರೆಹಮಾನ್ ನನ್ನ ಒಡನಾಟ ಹಳೆಯದ್ದು, ನಮ್ಮ ಪ್ರಗತಿಪರ ಹೋರಾಟಗಾರರ ಪರವಾಗಿ ಧ್ವನಿಯಾಗಿದ್ದವರು. ಮೊನ್ನೆ ಕೂಡ ನಮ್ಮ ಕಾರ್ಯಕ್ರಮವನ್ನು ವರದಿ ಮಾಡಲಾಗಿದೆ ಎಂದು ನಮ್ಮೊಡನೆ ಮಾತನಾಡಿದ್ದರು. ಆದರೆ ಅವರು ಇಲ್ಲ ಎನ್ನುವುದು ಅತ್ಯಂತ ನೋವಿನ ಸಂಗತಿ. ಜಿಲ್ಲೆಯ ಪತ್ರಿಕ ರಂಗ ಹಾಗೂ ಪ್ರಗತಿಪರ ಸಂಘಟನೆಗಳಿಗೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬ ವರ್ಗದವರ ನೋವನ್ನು ಮರೆಸುವ ಶಕ್ತಿಯನ್ನು ದೇವರು ನೀಡಲಿ ಎಂದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಜಾವಾಣಿ ಕಣ್ಣೂರು ಬಸವರಾಜು, ಖಜಾಂಚಿ ಮಹಾದೇವಸ್ವಾಮಿ, ನಿರ್ದೇಶಕರಾದ ಸೋಮಶೇಖರ್, ಮಂಗಲ ಲಿಂಗರಾಜು, ಸದಸ್ಯರಾದ ಪ್ರಭುಸ್ವಾಮಿ, ರಮೇಶ್, ಅಜ್ಜಿಪುರ ಕಲಾರವಿ, ರಾಜೇಶ್, ಬಂಡಳ್ಳಿ ಶಿವಕುಮಾರ್ ಉಪಸ್ಥಿತರಿದ್ದರು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago