ಜಿಲ್ಲೆಗಳು

ಹನೂರು – ಉಡುತೊರೆ ಜಲಾಶಯ ಭರ್ತಿ : ಬಾಗಿನ ಅರ್ಪಿಸಿದ ಶಾಸಕ ಆರ್. ನರೇಂದ್ರ

ಹನೂರು: ತಾಲೂಕಿನ ಪ್ರಮುಖ 8 ಜಲಾಶಯಗಳ ಪೈಕಿ ರಾಮನಗುಡ್ಡ ಹೊರತುಪಡಿಸಿ 7 ಜಲಾಶಯಗಳು ಭರ್ತಿಯಾಗಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ತಾಲ್ಲೂಕಿನ ಅಜ್ಜೀಪುರ ಸಮೀಪದ ಉಡುತೊರೆ ಜಲಾಶಯ ತುಂಬಿದ ಹಿನ್ನೆಲೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಉಡುತೊರೆ ಜಲಾಶಯ ಸತತ ಎರಡು ವರ್ಷಗಳಿಂದ ಭರ್ತಿಯಾಗುತ್ತಾ ಬಂದಿದೆ, ಕಳೆದ 18 ವರ್ಷಗಳಿಂದ ಮೇ ಮತ್ತು ಜೂನ್ ತಿಂಗಳಲ್ಲಿ ಜಲಾಶಯಗಳು ತುಂಬಿದ ಇತಿಹಾಸವೇ ಇಲ್ಲ,ಕಳೆದ 2ವರ್ಷಗಳಿಂದ ಸಮರ್ಪಕ ಮಳೆ ಆಗುತ್ತಿರುವುದರಿಂದ ರೈತರಿಗೆ ಅನುಕೂಲವಾಗಿದೆ. ಜಲಾಶಯಗಳ ನಿರ್ವಹಣೆಗೆ ಸಂಬಂಧಪಟ್ಟ ನೀರಾವರಿ ಇಲಾಖೆಯವರು ಸಮರ್ಪಕ ಅನುದಾನವನ್ನು ನೀಡದೇ ಇರುವುದರಿಂದ ಜಲಾಶಯಗಳು ಮತ್ತು ಕಾಲುವೆಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ. ಗುಂಡಾಲ್ ಜಲಾಶಯ ಹಾಗೂ ಉಡುತೊರೆ ಜಲಾಶಯ ಅಭಿವೃದ್ಧಿಗೆ ತಲಾ 15 ಕೋಟಿ ರೂ.ಗಳ ಅಗತ್ಯವಿದೆ ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಆದರೂ ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಮಗೆರೆಯಲ್ಲಿರುವ ನೀರಾವರಿ ಕಚೇರಿಯನ್ನು ಅಜ್ಜೀಪುರಕ್ಕೆ ಸ್ಥಳಾಂತರಿಸಬೇಕೆಂದು ಮೂರು ಜನ ಉಸ್ತುವಾರಿ ಸಚಿವರುಗಳಿಗೆ ಮನವಿ ಮಾಡಿಕೊಂಡಿದ್ದೆ.ಆದರೆ ಒಬ್ಬರು ಸ್ಪಂದಿಸಲಿಲ್ಲ ಇದಲ್ಲದೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದರೂ ಇದುವರೆಗೆ ಕ್ರಮ ವಹಿಸಿಲ್ಲ ಎಂದರು.

ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿಯನ್ನು ಹನೂರಿಗೆ ಸ್ಥಳಾಂತರಿಸಲು ಈಗಾಗಲೇ ಸರ್ಕಾರ ಆದೇಶಿಸಲಾಗಿದೆ . ಅತಿ ಶೀಘ್ರದಲ್ಲಿ ಕಚೇರಿ ಸ್ಥಳಾಂತರವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಬಸವರಾಜು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಮುಖಂಡರಾದ ಎಂ. ಮಾದೇವ್, ಅಜ್ಜೀಪುರ ನಾಗರಾಜು, ಕಲಂದರ್ ಪಾಷ ಎಇ ವೆಂಕಟೇಶ್ ಪ್ರಭು ಎಇಇಗಳಾದ ದೊಡ್ಡಿಂದುವಾಡಿ ರಮೇಶ್,ನವೀನ್,ಮಲ್ಲಿಕಾರ್ಜುನ್ ಸೇರಿದಂತೆ ಇನ್ನಿತರರು ಹಾಜರಿದ್ದರು .

andolanait

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

11 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

24 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago