ಹನೂರು: ತಾಲೂಕಿನ ಪ್ರಮುಖ 8 ಜಲಾಶಯಗಳ ಪೈಕಿ ರಾಮನಗುಡ್ಡ ಹೊರತುಪಡಿಸಿ 7 ಜಲಾಶಯಗಳು ಭರ್ತಿಯಾಗಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ತಾಲ್ಲೂಕಿನ ಅಜ್ಜೀಪುರ ಸಮೀಪದ ಉಡುತೊರೆ ಜಲಾಶಯ ತುಂಬಿದ ಹಿನ್ನೆಲೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಉಡುತೊರೆ ಜಲಾಶಯ ಸತತ ಎರಡು ವರ್ಷಗಳಿಂದ ಭರ್ತಿಯಾಗುತ್ತಾ ಬಂದಿದೆ, ಕಳೆದ 18 ವರ್ಷಗಳಿಂದ ಮೇ ಮತ್ತು ಜೂನ್ ತಿಂಗಳಲ್ಲಿ ಜಲಾಶಯಗಳು ತುಂಬಿದ ಇತಿಹಾಸವೇ ಇಲ್ಲ,ಕಳೆದ 2ವರ್ಷಗಳಿಂದ ಸಮರ್ಪಕ ಮಳೆ ಆಗುತ್ತಿರುವುದರಿಂದ ರೈತರಿಗೆ ಅನುಕೂಲವಾಗಿದೆ. ಜಲಾಶಯಗಳ ನಿರ್ವಹಣೆಗೆ ಸಂಬಂಧಪಟ್ಟ ನೀರಾವರಿ ಇಲಾಖೆಯವರು ಸಮರ್ಪಕ ಅನುದಾನವನ್ನು ನೀಡದೇ ಇರುವುದರಿಂದ ಜಲಾಶಯಗಳು ಮತ್ತು ಕಾಲುವೆಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ. ಗುಂಡಾಲ್ ಜಲಾಶಯ ಹಾಗೂ ಉಡುತೊರೆ ಜಲಾಶಯ ಅಭಿವೃದ್ಧಿಗೆ ತಲಾ 15 ಕೋಟಿ ರೂ.ಗಳ ಅಗತ್ಯವಿದೆ ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಆದರೂ ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಮಗೆರೆಯಲ್ಲಿರುವ ನೀರಾವರಿ ಕಚೇರಿಯನ್ನು ಅಜ್ಜೀಪುರಕ್ಕೆ ಸ್ಥಳಾಂತರಿಸಬೇಕೆಂದು ಮೂರು ಜನ ಉಸ್ತುವಾರಿ ಸಚಿವರುಗಳಿಗೆ ಮನವಿ ಮಾಡಿಕೊಂಡಿದ್ದೆ.ಆದರೆ ಒಬ್ಬರು ಸ್ಪಂದಿಸಲಿಲ್ಲ ಇದಲ್ಲದೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದರೂ ಇದುವರೆಗೆ ಕ್ರಮ ವಹಿಸಿಲ್ಲ ಎಂದರು.
ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿಯನ್ನು ಹನೂರಿಗೆ ಸ್ಥಳಾಂತರಿಸಲು ಈಗಾಗಲೇ ಸರ್ಕಾರ ಆದೇಶಿಸಲಾಗಿದೆ . ಅತಿ ಶೀಘ್ರದಲ್ಲಿ ಕಚೇರಿ ಸ್ಥಳಾಂತರವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಬಸವರಾಜು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಮುಖಂಡರಾದ ಎಂ. ಮಾದೇವ್, ಅಜ್ಜೀಪುರ ನಾಗರಾಜು, ಕಲಂದರ್ ಪಾಷ ಎಇ ವೆಂಕಟೇಶ್ ಪ್ರಭು ಎಇಇಗಳಾದ ದೊಡ್ಡಿಂದುವಾಡಿ ರಮೇಶ್,ನವೀನ್,ಮಲ್ಲಿಕಾರ್ಜುನ್ ಸೇರಿದಂತೆ ಇನ್ನಿತರರು ಹಾಜರಿದ್ದರು .
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…