ಹನೂರು: ತಾಲೂಕಿನ ಪ್ರಮುಖ 8 ಜಲಾಶಯಗಳ ಪೈಕಿ ರಾಮನಗುಡ್ಡ ಹೊರತುಪಡಿಸಿ 7 ಜಲಾಶಯಗಳು ಭರ್ತಿಯಾಗಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ತಾಲ್ಲೂಕಿನ ಅಜ್ಜೀಪುರ ಸಮೀಪದ ಉಡುತೊರೆ ಜಲಾಶಯ ತುಂಬಿದ ಹಿನ್ನೆಲೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಉಡುತೊರೆ ಜಲಾಶಯ ಸತತ ಎರಡು ವರ್ಷಗಳಿಂದ ಭರ್ತಿಯಾಗುತ್ತಾ ಬಂದಿದೆ, ಕಳೆದ 18 ವರ್ಷಗಳಿಂದ ಮೇ ಮತ್ತು ಜೂನ್ ತಿಂಗಳಲ್ಲಿ ಜಲಾಶಯಗಳು ತುಂಬಿದ ಇತಿಹಾಸವೇ ಇಲ್ಲ,ಕಳೆದ 2ವರ್ಷಗಳಿಂದ ಸಮರ್ಪಕ ಮಳೆ ಆಗುತ್ತಿರುವುದರಿಂದ ರೈತರಿಗೆ ಅನುಕೂಲವಾಗಿದೆ. ಜಲಾಶಯಗಳ ನಿರ್ವಹಣೆಗೆ ಸಂಬಂಧಪಟ್ಟ ನೀರಾವರಿ ಇಲಾಖೆಯವರು ಸಮರ್ಪಕ ಅನುದಾನವನ್ನು ನೀಡದೇ ಇರುವುದರಿಂದ ಜಲಾಶಯಗಳು ಮತ್ತು ಕಾಲುವೆಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ. ಗುಂಡಾಲ್ ಜಲಾಶಯ ಹಾಗೂ ಉಡುತೊರೆ ಜಲಾಶಯ ಅಭಿವೃದ್ಧಿಗೆ ತಲಾ 15 ಕೋಟಿ ರೂ.ಗಳ ಅಗತ್ಯವಿದೆ ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಆದರೂ ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಮಗೆರೆಯಲ್ಲಿರುವ ನೀರಾವರಿ ಕಚೇರಿಯನ್ನು ಅಜ್ಜೀಪುರಕ್ಕೆ ಸ್ಥಳಾಂತರಿಸಬೇಕೆಂದು ಮೂರು ಜನ ಉಸ್ತುವಾರಿ ಸಚಿವರುಗಳಿಗೆ ಮನವಿ ಮಾಡಿಕೊಂಡಿದ್ದೆ.ಆದರೆ ಒಬ್ಬರು ಸ್ಪಂದಿಸಲಿಲ್ಲ ಇದಲ್ಲದೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದರೂ ಇದುವರೆಗೆ ಕ್ರಮ ವಹಿಸಿಲ್ಲ ಎಂದರು.
ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿಯನ್ನು ಹನೂರಿಗೆ ಸ್ಥಳಾಂತರಿಸಲು ಈಗಾಗಲೇ ಸರ್ಕಾರ ಆದೇಶಿಸಲಾಗಿದೆ . ಅತಿ ಶೀಘ್ರದಲ್ಲಿ ಕಚೇರಿ ಸ್ಥಳಾಂತರವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಬಸವರಾಜು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಮುಖಂಡರಾದ ಎಂ. ಮಾದೇವ್, ಅಜ್ಜೀಪುರ ನಾಗರಾಜು, ಕಲಂದರ್ ಪಾಷ ಎಇ ವೆಂಕಟೇಶ್ ಪ್ರಭು ಎಇಇಗಳಾದ ದೊಡ್ಡಿಂದುವಾಡಿ ರಮೇಶ್,ನವೀನ್,ಮಲ್ಲಿಕಾರ್ಜುನ್ ಸೇರಿದಂತೆ ಇನ್ನಿತರರು ಹಾಜರಿದ್ದರು .
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…