ಜಿಲ್ಲೆಗಳು

ಹನೂರು – ಉಡುತೊರೆ ಜಲಾಶಯ ಭರ್ತಿ : ಬಾಗಿನ ಅರ್ಪಿಸಿದ ಶಾಸಕ ಆರ್. ನರೇಂದ್ರ

ಹನೂರು: ತಾಲೂಕಿನ ಪ್ರಮುಖ 8 ಜಲಾಶಯಗಳ ಪೈಕಿ ರಾಮನಗುಡ್ಡ ಹೊರತುಪಡಿಸಿ 7 ಜಲಾಶಯಗಳು ಭರ್ತಿಯಾಗಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ತಾಲ್ಲೂಕಿನ ಅಜ್ಜೀಪುರ ಸಮೀಪದ ಉಡುತೊರೆ ಜಲಾಶಯ ತುಂಬಿದ ಹಿನ್ನೆಲೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಉಡುತೊರೆ ಜಲಾಶಯ ಸತತ ಎರಡು ವರ್ಷಗಳಿಂದ ಭರ್ತಿಯಾಗುತ್ತಾ ಬಂದಿದೆ, ಕಳೆದ 18 ವರ್ಷಗಳಿಂದ ಮೇ ಮತ್ತು ಜೂನ್ ತಿಂಗಳಲ್ಲಿ ಜಲಾಶಯಗಳು ತುಂಬಿದ ಇತಿಹಾಸವೇ ಇಲ್ಲ,ಕಳೆದ 2ವರ್ಷಗಳಿಂದ ಸಮರ್ಪಕ ಮಳೆ ಆಗುತ್ತಿರುವುದರಿಂದ ರೈತರಿಗೆ ಅನುಕೂಲವಾಗಿದೆ. ಜಲಾಶಯಗಳ ನಿರ್ವಹಣೆಗೆ ಸಂಬಂಧಪಟ್ಟ ನೀರಾವರಿ ಇಲಾಖೆಯವರು ಸಮರ್ಪಕ ಅನುದಾನವನ್ನು ನೀಡದೇ ಇರುವುದರಿಂದ ಜಲಾಶಯಗಳು ಮತ್ತು ಕಾಲುವೆಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ. ಗುಂಡಾಲ್ ಜಲಾಶಯ ಹಾಗೂ ಉಡುತೊರೆ ಜಲಾಶಯ ಅಭಿವೃದ್ಧಿಗೆ ತಲಾ 15 ಕೋಟಿ ರೂ.ಗಳ ಅಗತ್ಯವಿದೆ ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಆದರೂ ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಮಗೆರೆಯಲ್ಲಿರುವ ನೀರಾವರಿ ಕಚೇರಿಯನ್ನು ಅಜ್ಜೀಪುರಕ್ಕೆ ಸ್ಥಳಾಂತರಿಸಬೇಕೆಂದು ಮೂರು ಜನ ಉಸ್ತುವಾರಿ ಸಚಿವರುಗಳಿಗೆ ಮನವಿ ಮಾಡಿಕೊಂಡಿದ್ದೆ.ಆದರೆ ಒಬ್ಬರು ಸ್ಪಂದಿಸಲಿಲ್ಲ ಇದಲ್ಲದೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದರೂ ಇದುವರೆಗೆ ಕ್ರಮ ವಹಿಸಿಲ್ಲ ಎಂದರು.

ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿಯನ್ನು ಹನೂರಿಗೆ ಸ್ಥಳಾಂತರಿಸಲು ಈಗಾಗಲೇ ಸರ್ಕಾರ ಆದೇಶಿಸಲಾಗಿದೆ . ಅತಿ ಶೀಘ್ರದಲ್ಲಿ ಕಚೇರಿ ಸ್ಥಳಾಂತರವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಬಸವರಾಜು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಮುಖಂಡರಾದ ಎಂ. ಮಾದೇವ್, ಅಜ್ಜೀಪುರ ನಾಗರಾಜು, ಕಲಂದರ್ ಪಾಷ ಎಇ ವೆಂಕಟೇಶ್ ಪ್ರಭು ಎಇಇಗಳಾದ ದೊಡ್ಡಿಂದುವಾಡಿ ರಮೇಶ್,ನವೀನ್,ಮಲ್ಲಿಕಾರ್ಜುನ್ ಸೇರಿದಂತೆ ಇನ್ನಿತರರು ಹಾಜರಿದ್ದರು .

andolanait

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

2 hours ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

2 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

2 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

3 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

3 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

4 hours ago