ಹನೂರು: ಪಟ್ಟಣದಲ್ಲಿ ಅಂಗಡಿ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯವನ್ನು ಕೆ.ಶಿಫ್ ಅಧಿಕಾರಿಗಳು ಶುಕ್ರವಾರದಿಂದ ಪ್ರಾರಂಭಿಸಿದರು.
ಕೊಳ್ಳೇಗಾಲದಿಂದ ಹನೂರಿನವರೆಗೆ 23 ಕಿ.ಮೀ ರಸ್ತೆ ಅಭಿವೃದ್ಧಿಗೆ 108 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಈ ಹಿನ್ನಲೆ ಈ ಮಾರ್ಗದ ಹೊರವಲಯಗಳಲ್ಲಿ ರಸ್ತೆಯನ್ನು ನಿರ್ಮಿಸಲಾಗಿತ್ತು. ಅಲ್ಲದೇ ಮಂಗಲ, ಕಾಮಗೆರೆ ಗ್ರಾಮದಲ್ಲಿ ರಸ್ತೆ ಬದಿಯಲ್ಲಿನ ಕಟ್ಟಡಗಳನ್ನು ತೆರೆವುಗೊಳಿಸಲಾಗಿತ್ತು. ಆದರೆ ಹನೂರು ಪಟ್ಟಣದಲ್ಲಿ ಅಂಗಡಿ ಮಳಿಗೆ ಕಟ್ಟಡವನ್ನು ತೆರೆವುಗೊಳಿಸಿರಲಿಲ್ಲ. ಈ ಸಂಬಂಧ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಲಾಗಿತ್ತು. ಆದಾಗ್ಯೂ ಅಂಗಡಿಯನ್ನು ಖಾಲಿ ಮಾಡಿರಲಿಲ್ಲ. ಇದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ತೊಡುಕಾಗಿ ಪರಿಣಮಿಸಿತ್ತು.
ಈ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಕೊಳ್ಳೇಗಾಲದಿಂದ ಹನೂರಿನವರೆಗಿನ ಕೆ.ಶಿಫ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದರು. ಈ ದಿಸೆಯಲ್ಲಿ ಕಟ್ಟಡ ಮಾಲೀಕರಿಗೆ ಸೂಚನೆಯನ್ನು ನೀಡಲಾಗಿತ್ತು. ಆಗಾಗಿ ಶುಕ್ರವಾರ ಕೆ.ಶಿಫ್ ಅಧಿಕಾರಿಗಳು ಪಟ್ಟಣದಲ್ಲಿ ಕಟ್ಟಡಗಳ ತೆರೆವಿನ ಕಾರ್ಯಕ್ಕೆ ಮುಂದಾಗಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…