ಹನೂರು: ಪಟ್ಟಣದಲ್ಲಿ ಅಂಗಡಿ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯವನ್ನು ಕೆ.ಶಿಫ್ ಅಧಿಕಾರಿಗಳು ಶುಕ್ರವಾರದಿಂದ ಪ್ರಾರಂಭಿಸಿದರು.
ಕೊಳ್ಳೇಗಾಲದಿಂದ ಹನೂರಿನವರೆಗೆ 23 ಕಿ.ಮೀ ರಸ್ತೆ ಅಭಿವೃದ್ಧಿಗೆ 108 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಈ ಹಿನ್ನಲೆ ಈ ಮಾರ್ಗದ ಹೊರವಲಯಗಳಲ್ಲಿ ರಸ್ತೆಯನ್ನು ನಿರ್ಮಿಸಲಾಗಿತ್ತು. ಅಲ್ಲದೇ ಮಂಗಲ, ಕಾಮಗೆರೆ ಗ್ರಾಮದಲ್ಲಿ ರಸ್ತೆ ಬದಿಯಲ್ಲಿನ ಕಟ್ಟಡಗಳನ್ನು ತೆರೆವುಗೊಳಿಸಲಾಗಿತ್ತು. ಆದರೆ ಹನೂರು ಪಟ್ಟಣದಲ್ಲಿ ಅಂಗಡಿ ಮಳಿಗೆ ಕಟ್ಟಡವನ್ನು ತೆರೆವುಗೊಳಿಸಿರಲಿಲ್ಲ. ಈ ಸಂಬಂಧ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಲಾಗಿತ್ತು. ಆದಾಗ್ಯೂ ಅಂಗಡಿಯನ್ನು ಖಾಲಿ ಮಾಡಿರಲಿಲ್ಲ. ಇದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ತೊಡುಕಾಗಿ ಪರಿಣಮಿಸಿತ್ತು.
ಈ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಕೊಳ್ಳೇಗಾಲದಿಂದ ಹನೂರಿನವರೆಗಿನ ಕೆ.ಶಿಫ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದರು. ಈ ದಿಸೆಯಲ್ಲಿ ಕಟ್ಟಡ ಮಾಲೀಕರಿಗೆ ಸೂಚನೆಯನ್ನು ನೀಡಲಾಗಿತ್ತು. ಆಗಾಗಿ ಶುಕ್ರವಾರ ಕೆ.ಶಿಫ್ ಅಧಿಕಾರಿಗಳು ಪಟ್ಟಣದಲ್ಲಿ ಕಟ್ಟಡಗಳ ತೆರೆವಿನ ಕಾರ್ಯಕ್ಕೆ ಮುಂದಾಗಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…