Mysore
22
haze

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಕಬ್ಬಡ್ಡಿ ಪಂದ್ಯ : ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ ಗುರು ವೃಂದ

ಹನೂರು: ಸಮೀಪದ ಮಂಗಲ ಏಕಲವ್ಯ ಮಾದರಿ ವಸತಿ ಶಾಲೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬ್ಬಡ್ಡಿ ಪಂದ್ಯಾವಳಿಯಲ್ಲಿ (ಬಾಲಕರ ವಿಭಾಗ) ಪ್ರಥಮ ಸ್ಥಾನವನ್ನು ಪಡೆದು ರಾಜ್ಯ (ವಿಭಾಗ)ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚಾಮರಾಜನಗರ ಜಿಲ್ಲೆ ಸಂತೆಮರಳ್ಳಿಯ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬ್ಬಡ್ಡಿ ಕ್ರೀಡಾಕೂಟ ಪಂದ್ಯಾವಳಿಯಲ್ಲಿ ಈ ಸಾಧನೆಗೈದಿದ್ದಾರೆ.

ರಾಜ್ಯಮಟ್ಟಕ್ಕೆ ಆಯ್ಕೆಯಾಗಲು ಕಾರಣಕರ್ತರಾದ ದೈಹಿಕ ಶಿಕ್ಷಕ ಬಾಲರಾಜು ಹಾಗೂ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರಾದ ಮಂಜುನಾಥ್, ಉಪನ್ಯಾಸಕ ವೃಂದ, ನಿಲಯಪಾಲಕರು ಅಭಿನಂದಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!