ಜಿಲ್ಲೆಗಳು

ಹನೂರು : ಕೆಶಿಪ್ ರಸ್ತೆ ಅಭಿವೃದ್ಧಿ ಕಾಮಗಾರಿ ಸಂಬಂಧ ಬೃಹತ್ ಗಾತ್ರದ ಮರಗಳ ತೆರವು

ಹನೂರು: ಪಟ್ಟಣದಲ್ಲಿ ಕೆಶಿಪ್ ರಸ್ತೆ ಅಭಿವೃದ್ಧಿ ಸಂಬಂಧ 2 ಬೃಹತ್ ಗಾತ್ರದ ಮರಗಳನ್ನು ತೆರವು ಗೊಳಿಸಲಾಗಿದೆ.

ಕೊಳ್ಳೇಗಾಲದಿಂದ- ಹನೂರು ಪಟ್ಟಣದ ವರೆಗೆ 108 ಕೋಟಿ ವೆಚ್ಚದಲ್ಲಿ 23 ಕಿಲೋ ಮೀಟರ್ ರಸ್ತೆಯನ್ನು ಕೆಶಿಪ್ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗುತ್ತಿದ್ದು ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ.ಈ ಸಂಬಂಧ ಕಳೆದ 1ವಾರದಿಂದ ಮಳಿಗೆಗಳನ್ನು ತೆರವು ಗೊಳಿಸಲಾಗಿತ್ತು. ಇದೀಗ ಮುಖ್ಯರಸ್ತೆಯಲ್ಲಿದ್ದ 2ಬೃಹತ್ ಗಾತ್ರದ ಮರವನ್ನು ತೆರವುಗೊಳಿಸಿ ರಸ್ತೆ ಅಗಲೀಕರಣ ಕಾಮಗಾರಿ ವೇಗ ಪಡೆದುಕೊಂಡಿದೆ.
ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಾರಂಭವಾಗಿ 4ವರ್ಷಗಳೇ ಕಳೆದಿದ್ದರೂ ಇನ್ನೂ ಪೂರ್ಣಗೊಂಡಿರಲಿಲ್ಲ. ಸಚಿವ ವಿ ಸೋಮಣ್ಣ ಹಾಗೂ ಶಾಸಕ ಆರ್ ನರೇಂದ್ರ ಅಧಿಕಾರಿಗಳ ಸಭೆ ನಡೆಸಿ ಕಾಮಗಾರಿಯನ್ನು ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿರುವ ಹಿನ್ನೆಲೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಸಾರ್ವಜನಿಕರಿಗೆ ನಿತ್ಯ ಧೂಳಿನ ಅಭಿಷೇಕ : ಕೆಶಿಪ್ ರಸ್ತೆ ಅಭಿವೃದ್ಧಿ ಸಂಬಂಧ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಅಧಿಕ ಭಾರದ ವಾಹನಗಳು ಪ್ರತಿ ನಿತ್ಯ ಸಂಚರಿಸುತ್ತಿವೆ. ಇದಲ್ಲದೆ ತಮಿಳುನಾಡಿಗೆ ತೆರಳುವ ಸರಕು ಸಾಗಣೆ ವಾಹನಗಳು ಸಹ ಇದೇ ರಸ್ತೆಯಲ್ಲಿ ತೆರಳುತ್ತಿರುವುದರಿಂದ ಧೂಳು ಹೆಚ್ಚಾಗಿ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ.ಕೆಶಿಪ್ ಅಭಿಯಂತರರಿಗೆ ಸಾರ್ವಜನಿಕರು ಹಲವು ಬಾರಿ ರಸ್ತೆಗೆ ಪ್ರತಿದಿನ ನೀರು ಹಾಕಿಸುವಂತೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ,ಸಚಿವರು ಹಾಗೂ ಗಣ್ಯರು ಮಲೆಮಹದೇಶ್ವರ ಬೆಟ್ಟಕ್ಕೆ ಹಾಗೂ ಕಾರ್ಯಕ್ರಮ ನಿಮಿತ್ತ ಬರುವಂತಹ ಸಂದರ್ಭದಲ್ಲಿ ನೀರನ್ನು ಹಾಕಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

andolanait

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

8 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

8 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

8 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

9 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

11 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

12 hours ago