ಜಿಲ್ಲೆಗಳು

ಹನೂರು : ಚಿರತೆ ದಾಳಿಯಿಂದ ಮೃತಪಟ್ಟ ಗೋವಿಂದಯ್ಯ ಮನೆಗೆ ಶಾಸಕ ಆರ್. ನರೇಂದ್ರ ಭೇಟಿ, ಸಾಂತ್ವನ

ಹನೂರು: ಚಿರತೆ ದಾಳಿಗೆ ಮೃತಪಟ್ಟ ಕೆ.ವಿ.ಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಅವರ ಮನೆಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

ಶುಕ್ರವಾರ ಬೆಳಿಗ್ಗೆ ಚಿರತೆ ದಾಳಿಗೆ ಗೋವಿಂದಯ್ಯ ಎಂಬವರು ಮೃತಪಟ್ಟಿದ್ದರು. ಶಾಸಕ ಆರ್ ನರೇಂದ್ರ ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದ ಹಿನ್ನೆಲೆ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಇದೇ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ ಮಾತನಾಡಿ ನಮ್ಮ ಹನೂರು ಕ್ಷೇತ್ರದಲ್ಲಿ ಇದುವರೆಗೂ ಇಂತಹ ಪ್ರಕರಣಗಳು ಕಂಡು ಬಂದಿರಲಿಲ್ಲ, ಇದೀಗ ಚಿರತೆ ದಾಳಿಗೆ ಮೃತಪಟ್ಟಿರುವುದು ದುರ್ದೈವದ ಸಂಗತಿ, ಅರಣ್ಯ ಇಲಾಖೆ ವತಿಯಿಂದ ನೀಡಲಾಗುವ 7.5ಲಕ್ಷ ಪರಿಹಾರವನ್ನು 1ವಾರದೊಳಗೆ ನಿಮ್ಮ ಖಾತೆಗೆ ಜಮಾ ಮಾಡಲು ಅಧಿಕಾರಿಗಳಿಗೆ ತಿಳಿಸುತ್ತೇನೆ. ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು ಈಗಾಗಲೇ ಅರಣ್ಯ ಇಲಾಖೆಗೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ,ಚಿರತೆ ಸೆರೆ ಹಿಡಿಯುವವರೆಗೂ ಜಾನುವಾರುಗಳನ್ನು ಮೇಯಿಸಲು ಕಾಡಿಗೆ ತೆರಳಬಾರದು ಎಂದು ಸಲಹೆ ನೀಡಿದರು.
ಕಾವೇರಿ ವನ್ಯಜೀವಿ ವಿಭಾಗದ ಡಿಸಿಎಫ್ ನಂದೀಶ್ ಮಾತನಾಡಿ ಈಗಾಗಲೇ ಚಿರತೆ ಸೆರೆ ಹಿಡಿಯಲು ಹದಿನೈದು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದಲ್ಲದೆ 4 ಬೋನುಗಳನ್ನು ಸಹ ಇಡಲಾಗಿದ್ದು ಆದಷ್ಟು ಬೇಗ ಚಿರತೆ ಸೆರೆ ಹಿಡಿಯಲು ಕ್ರಮ ವಹಿಸಲಾಗುವುದು .ಗ್ರಾಮಸ್ಥರು ಸಹ ಇಲಾಖೆಯ ಜೊತೆ ಸಹಕರಿಸಬೇಕು. ರಾತ್ರಿ ಗಸ್ತು ಹಾಗೂ ಬೆಳಗಿನ ವೇಳೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗ್ರಾಮಸ್ಥರಿಗೆ ಚಿರತೆ ಕಂಡು ಬಂದರೆ ತಕ್ಷಣ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಎಸಿಎಫ್ ಅಂಕರಾಜು, ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್, ಎಎಸ್ಸೈ ಶಿವರಾಜು, ಪೇದೆಗಳಾದ ಮೂರ್ತಿ, ರಾಘವೇಂದ್ರ,ಮುಖಂಡರುಗಳಾದ ವೆಂಕಟರಮಣನಾಯ್ಡು ನಾಗೇಶ್ ಮಲ್ಲಯ್ಯ ಹಾಗೂ ಇನ್ನಿತರರು ಹಾಜರಿದ್ದರು.

andolanait

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

2 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

6 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

6 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

7 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

8 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

9 hours ago