ಜಿಲ್ಲೆಗಳು

ಹನೂರು : ಚಿರತೆ ದಾಳಿಯಿಂದ ಮೃತಪಟ್ಟ ಗೋವಿಂದಯ್ಯ ಮನೆಗೆ ಶಾಸಕ ಆರ್. ನರೇಂದ್ರ ಭೇಟಿ, ಸಾಂತ್ವನ

ಹನೂರು: ಚಿರತೆ ದಾಳಿಗೆ ಮೃತಪಟ್ಟ ಕೆ.ವಿ.ಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಅವರ ಮನೆಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

ಶುಕ್ರವಾರ ಬೆಳಿಗ್ಗೆ ಚಿರತೆ ದಾಳಿಗೆ ಗೋವಿಂದಯ್ಯ ಎಂಬವರು ಮೃತಪಟ್ಟಿದ್ದರು. ಶಾಸಕ ಆರ್ ನರೇಂದ್ರ ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದ ಹಿನ್ನೆಲೆ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಇದೇ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ ಮಾತನಾಡಿ ನಮ್ಮ ಹನೂರು ಕ್ಷೇತ್ರದಲ್ಲಿ ಇದುವರೆಗೂ ಇಂತಹ ಪ್ರಕರಣಗಳು ಕಂಡು ಬಂದಿರಲಿಲ್ಲ, ಇದೀಗ ಚಿರತೆ ದಾಳಿಗೆ ಮೃತಪಟ್ಟಿರುವುದು ದುರ್ದೈವದ ಸಂಗತಿ, ಅರಣ್ಯ ಇಲಾಖೆ ವತಿಯಿಂದ ನೀಡಲಾಗುವ 7.5ಲಕ್ಷ ಪರಿಹಾರವನ್ನು 1ವಾರದೊಳಗೆ ನಿಮ್ಮ ಖಾತೆಗೆ ಜಮಾ ಮಾಡಲು ಅಧಿಕಾರಿಗಳಿಗೆ ತಿಳಿಸುತ್ತೇನೆ. ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು ಈಗಾಗಲೇ ಅರಣ್ಯ ಇಲಾಖೆಗೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ,ಚಿರತೆ ಸೆರೆ ಹಿಡಿಯುವವರೆಗೂ ಜಾನುವಾರುಗಳನ್ನು ಮೇಯಿಸಲು ಕಾಡಿಗೆ ತೆರಳಬಾರದು ಎಂದು ಸಲಹೆ ನೀಡಿದರು.
ಕಾವೇರಿ ವನ್ಯಜೀವಿ ವಿಭಾಗದ ಡಿಸಿಎಫ್ ನಂದೀಶ್ ಮಾತನಾಡಿ ಈಗಾಗಲೇ ಚಿರತೆ ಸೆರೆ ಹಿಡಿಯಲು ಹದಿನೈದು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದಲ್ಲದೆ 4 ಬೋನುಗಳನ್ನು ಸಹ ಇಡಲಾಗಿದ್ದು ಆದಷ್ಟು ಬೇಗ ಚಿರತೆ ಸೆರೆ ಹಿಡಿಯಲು ಕ್ರಮ ವಹಿಸಲಾಗುವುದು .ಗ್ರಾಮಸ್ಥರು ಸಹ ಇಲಾಖೆಯ ಜೊತೆ ಸಹಕರಿಸಬೇಕು. ರಾತ್ರಿ ಗಸ್ತು ಹಾಗೂ ಬೆಳಗಿನ ವೇಳೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗ್ರಾಮಸ್ಥರಿಗೆ ಚಿರತೆ ಕಂಡು ಬಂದರೆ ತಕ್ಷಣ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಎಸಿಎಫ್ ಅಂಕರಾಜು, ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್, ಎಎಸ್ಸೈ ಶಿವರಾಜು, ಪೇದೆಗಳಾದ ಮೂರ್ತಿ, ರಾಘವೇಂದ್ರ,ಮುಖಂಡರುಗಳಾದ ವೆಂಕಟರಮಣನಾಯ್ಡು ನಾಗೇಶ್ ಮಲ್ಲಯ್ಯ ಹಾಗೂ ಇನ್ನಿತರರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

4 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

4 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

4 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

7 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

7 hours ago