ಜಿಲ್ಲೆಗಳು

ಹನೂರು : ಚಿರತೆ ದಾಳಿಯಿಂದ ಮೃತಪಟ್ಟ ಗೋವಿಂದಯ್ಯ ಮನೆಗೆ ಶಾಸಕ ಆರ್. ನರೇಂದ್ರ ಭೇಟಿ, ಸಾಂತ್ವನ

ಹನೂರು: ಚಿರತೆ ದಾಳಿಗೆ ಮೃತಪಟ್ಟ ಕೆ.ವಿ.ಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಅವರ ಮನೆಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

ಶುಕ್ರವಾರ ಬೆಳಿಗ್ಗೆ ಚಿರತೆ ದಾಳಿಗೆ ಗೋವಿಂದಯ್ಯ ಎಂಬವರು ಮೃತಪಟ್ಟಿದ್ದರು. ಶಾಸಕ ಆರ್ ನರೇಂದ್ರ ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದ ಹಿನ್ನೆಲೆ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಇದೇ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ ಮಾತನಾಡಿ ನಮ್ಮ ಹನೂರು ಕ್ಷೇತ್ರದಲ್ಲಿ ಇದುವರೆಗೂ ಇಂತಹ ಪ್ರಕರಣಗಳು ಕಂಡು ಬಂದಿರಲಿಲ್ಲ, ಇದೀಗ ಚಿರತೆ ದಾಳಿಗೆ ಮೃತಪಟ್ಟಿರುವುದು ದುರ್ದೈವದ ಸಂಗತಿ, ಅರಣ್ಯ ಇಲಾಖೆ ವತಿಯಿಂದ ನೀಡಲಾಗುವ 7.5ಲಕ್ಷ ಪರಿಹಾರವನ್ನು 1ವಾರದೊಳಗೆ ನಿಮ್ಮ ಖಾತೆಗೆ ಜಮಾ ಮಾಡಲು ಅಧಿಕಾರಿಗಳಿಗೆ ತಿಳಿಸುತ್ತೇನೆ. ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು ಈಗಾಗಲೇ ಅರಣ್ಯ ಇಲಾಖೆಗೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ,ಚಿರತೆ ಸೆರೆ ಹಿಡಿಯುವವರೆಗೂ ಜಾನುವಾರುಗಳನ್ನು ಮೇಯಿಸಲು ಕಾಡಿಗೆ ತೆರಳಬಾರದು ಎಂದು ಸಲಹೆ ನೀಡಿದರು.
ಕಾವೇರಿ ವನ್ಯಜೀವಿ ವಿಭಾಗದ ಡಿಸಿಎಫ್ ನಂದೀಶ್ ಮಾತನಾಡಿ ಈಗಾಗಲೇ ಚಿರತೆ ಸೆರೆ ಹಿಡಿಯಲು ಹದಿನೈದು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದಲ್ಲದೆ 4 ಬೋನುಗಳನ್ನು ಸಹ ಇಡಲಾಗಿದ್ದು ಆದಷ್ಟು ಬೇಗ ಚಿರತೆ ಸೆರೆ ಹಿಡಿಯಲು ಕ್ರಮ ವಹಿಸಲಾಗುವುದು .ಗ್ರಾಮಸ್ಥರು ಸಹ ಇಲಾಖೆಯ ಜೊತೆ ಸಹಕರಿಸಬೇಕು. ರಾತ್ರಿ ಗಸ್ತು ಹಾಗೂ ಬೆಳಗಿನ ವೇಳೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗ್ರಾಮಸ್ಥರಿಗೆ ಚಿರತೆ ಕಂಡು ಬಂದರೆ ತಕ್ಷಣ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಎಸಿಎಫ್ ಅಂಕರಾಜು, ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್, ಎಎಸ್ಸೈ ಶಿವರಾಜು, ಪೇದೆಗಳಾದ ಮೂರ್ತಿ, ರಾಘವೇಂದ್ರ,ಮುಖಂಡರುಗಳಾದ ವೆಂಕಟರಮಣನಾಯ್ಡು ನಾಗೇಶ್ ಮಲ್ಲಯ್ಯ ಹಾಗೂ ಇನ್ನಿತರರು ಹಾಜರಿದ್ದರು.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

6 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

8 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

8 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

12 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

17 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

17 hours ago