ಜಿಲ್ಲೆಗಳು

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಸಚಿವ ವಿ. ಸೋಮಣ್ಣ ಭೇಟಿ

ಹನೂರು: ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಮಲೆಮಹದೇಶ್ವರ ದರ್ಶನ ಪಡೆದರು. ನಂತರ ಪ್ರಾಧಿಕಾರದ ನೌಕರ ಕೆ ಮಹಾದೇವಸ್ವಾಮಿ ರವರು ತಮ್ಮ ಸ್ವಂತ ಹಣದಲ್ಲಿ ಗಣಪತಿ ದೇವಾಲಯ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ವಿನೂತನ ಮುಖ್ಯದ್ವಾರವನ್ನು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ವಿ ಸೋಮಣ್ಣ ಪ್ರಾಧಿಕಾರದ ನೌಕರ ಮಹದೇವಸ್ವಾಮಿರವರು 7 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಮುಖ್ಯದ್ವಾರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಕ್ಷೇತ್ರದ ಪವಾಡ ಪುರುಷ ಮಲೆ ಮಾದೇಶ್ವರ ಅವರಿಗೆ ಒಳಿತು ಮಾಡಲಿ ಎಂದು ಆಶಿಸಿದರು.
ನಂತರ ಬೆಳ್ಳಿ ರಥೋತ್ಸವ ನಿರ್ಮಾಣ ಮಾಡುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಸೋಮಣ್ಣ ಆದಷ್ಟು ಶೀಘ್ರ ರಥೋತ್ಸವ ಕಾಮಗಾರಿ ಪೂರ್ಣಗೊಳಿಸಿ ಭಕ್ತರ ಅನುಕೂಲಕ್ಕೆ ಅವಕಾಶ ಕಲ್ಪಿಸಬೇಕು. ಮಲೆಮಹದೇಶ್ವರ ಬೆಟ್ಟಕ್ಕೆ ಇತ್ತೀಚಿನ ದಿನಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ .ಇವರಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕಾದದ್ದು ಪ್ರಾಧಿಕಾರದ ಜವಾಬ್ದಾರಿ, ಅಧಿಕಾರಿಗಳು ತಮ್ಮ ಕಾರ್ಯವೈಖರಿಯನ್ನು ನಿಷ್ಠೆಯಿಂದ ಮಾಡಿದರೆ ತಮಗೂ ಸಹ ಒಳಿತಾಗಲಿದೆ. ನೌಕರರು ಸಂಬಳಕ್ಕಾಗಿ ದುಡಿಯುತ್ತಿದ್ದೇವೆ ಎಂದುಕೊಳ್ಳಬೇಡಿ ಮಲೆಮಾದೇಶ್ವರರ ಸೇವೆ ಮಾಡುತ್ತಿದ್ದೇವೆ ಎಂದು ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.


ಈ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿ ಡಿ ಎಸ್ ರಮೇಶ್, ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಜಿಲ್ಲಾ ಪಂಚಾಯತ್ ಸಿಇಒ ಗಾಯತ್ರಿ ,ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್,ಪ್ರಧಾನ ಅರ್ಚಕ ಕರವೀರ ಸ್ವಾಮಿ,ಸಚಿವರ ಆಪ್ತ ಸಹಾಯಕ ಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

38 mins ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

43 mins ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

45 mins ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

47 mins ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

49 mins ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

13 hours ago