ಜಿಲ್ಲೆಗಳು

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಸಚಿವ ವಿ. ಸೋಮಣ್ಣ ಭೇಟಿ

ಹನೂರು: ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಮಲೆಮಹದೇಶ್ವರ ದರ್ಶನ ಪಡೆದರು. ನಂತರ ಪ್ರಾಧಿಕಾರದ ನೌಕರ ಕೆ ಮಹಾದೇವಸ್ವಾಮಿ ರವರು ತಮ್ಮ ಸ್ವಂತ ಹಣದಲ್ಲಿ ಗಣಪತಿ ದೇವಾಲಯ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ವಿನೂತನ ಮುಖ್ಯದ್ವಾರವನ್ನು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ವಿ ಸೋಮಣ್ಣ ಪ್ರಾಧಿಕಾರದ ನೌಕರ ಮಹದೇವಸ್ವಾಮಿರವರು 7 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಮುಖ್ಯದ್ವಾರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಕ್ಷೇತ್ರದ ಪವಾಡ ಪುರುಷ ಮಲೆ ಮಾದೇಶ್ವರ ಅವರಿಗೆ ಒಳಿತು ಮಾಡಲಿ ಎಂದು ಆಶಿಸಿದರು.
ನಂತರ ಬೆಳ್ಳಿ ರಥೋತ್ಸವ ನಿರ್ಮಾಣ ಮಾಡುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಸೋಮಣ್ಣ ಆದಷ್ಟು ಶೀಘ್ರ ರಥೋತ್ಸವ ಕಾಮಗಾರಿ ಪೂರ್ಣಗೊಳಿಸಿ ಭಕ್ತರ ಅನುಕೂಲಕ್ಕೆ ಅವಕಾಶ ಕಲ್ಪಿಸಬೇಕು. ಮಲೆಮಹದೇಶ್ವರ ಬೆಟ್ಟಕ್ಕೆ ಇತ್ತೀಚಿನ ದಿನಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ .ಇವರಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕಾದದ್ದು ಪ್ರಾಧಿಕಾರದ ಜವಾಬ್ದಾರಿ, ಅಧಿಕಾರಿಗಳು ತಮ್ಮ ಕಾರ್ಯವೈಖರಿಯನ್ನು ನಿಷ್ಠೆಯಿಂದ ಮಾಡಿದರೆ ತಮಗೂ ಸಹ ಒಳಿತಾಗಲಿದೆ. ನೌಕರರು ಸಂಬಳಕ್ಕಾಗಿ ದುಡಿಯುತ್ತಿದ್ದೇವೆ ಎಂದುಕೊಳ್ಳಬೇಡಿ ಮಲೆಮಾದೇಶ್ವರರ ಸೇವೆ ಮಾಡುತ್ತಿದ್ದೇವೆ ಎಂದು ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.


ಈ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿ ಡಿ ಎಸ್ ರಮೇಶ್, ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಜಿಲ್ಲಾ ಪಂಚಾಯತ್ ಸಿಇಒ ಗಾಯತ್ರಿ ,ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್,ಪ್ರಧಾನ ಅರ್ಚಕ ಕರವೀರ ಸ್ವಾಮಿ,ಸಚಿವರ ಆಪ್ತ ಸಹಾಯಕ ಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago