ಜಿಲ್ಲೆಗಳು

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಸಚಿವ ವಿ. ಸೋಮಣ್ಣ ಭೇಟಿ

ಹನೂರು: ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಮಲೆಮಹದೇಶ್ವರ ದರ್ಶನ ಪಡೆದರು. ನಂತರ ಪ್ರಾಧಿಕಾರದ ನೌಕರ ಕೆ ಮಹಾದೇವಸ್ವಾಮಿ ರವರು ತಮ್ಮ ಸ್ವಂತ ಹಣದಲ್ಲಿ ಗಣಪತಿ ದೇವಾಲಯ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ವಿನೂತನ ಮುಖ್ಯದ್ವಾರವನ್ನು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ವಿ ಸೋಮಣ್ಣ ಪ್ರಾಧಿಕಾರದ ನೌಕರ ಮಹದೇವಸ್ವಾಮಿರವರು 7 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಮುಖ್ಯದ್ವಾರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಕ್ಷೇತ್ರದ ಪವಾಡ ಪುರುಷ ಮಲೆ ಮಾದೇಶ್ವರ ಅವರಿಗೆ ಒಳಿತು ಮಾಡಲಿ ಎಂದು ಆಶಿಸಿದರು.
ನಂತರ ಬೆಳ್ಳಿ ರಥೋತ್ಸವ ನಿರ್ಮಾಣ ಮಾಡುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಸೋಮಣ್ಣ ಆದಷ್ಟು ಶೀಘ್ರ ರಥೋತ್ಸವ ಕಾಮಗಾರಿ ಪೂರ್ಣಗೊಳಿಸಿ ಭಕ್ತರ ಅನುಕೂಲಕ್ಕೆ ಅವಕಾಶ ಕಲ್ಪಿಸಬೇಕು. ಮಲೆಮಹದೇಶ್ವರ ಬೆಟ್ಟಕ್ಕೆ ಇತ್ತೀಚಿನ ದಿನಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ .ಇವರಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕಾದದ್ದು ಪ್ರಾಧಿಕಾರದ ಜವಾಬ್ದಾರಿ, ಅಧಿಕಾರಿಗಳು ತಮ್ಮ ಕಾರ್ಯವೈಖರಿಯನ್ನು ನಿಷ್ಠೆಯಿಂದ ಮಾಡಿದರೆ ತಮಗೂ ಸಹ ಒಳಿತಾಗಲಿದೆ. ನೌಕರರು ಸಂಬಳಕ್ಕಾಗಿ ದುಡಿಯುತ್ತಿದ್ದೇವೆ ಎಂದುಕೊಳ್ಳಬೇಡಿ ಮಲೆಮಾದೇಶ್ವರರ ಸೇವೆ ಮಾಡುತ್ತಿದ್ದೇವೆ ಎಂದು ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.


ಈ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿ ಡಿ ಎಸ್ ರಮೇಶ್, ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಜಿಲ್ಲಾ ಪಂಚಾಯತ್ ಸಿಇಒ ಗಾಯತ್ರಿ ,ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್,ಪ್ರಧಾನ ಅರ್ಚಕ ಕರವೀರ ಸ್ವಾಮಿ,ಸಚಿವರ ಆಪ್ತ ಸಹಾಯಕ ಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

3 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

5 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

6 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

9 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago