ಹನೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಡಾ ಅವರ ಸೂಚನೆಯಂತೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಸೆ.17 ರಿಂದ ಮಹಾತ್ಮ ಗಾಂಧಿ ಜಯಂತಿ ಅ.2ರವರೆಗೆ ಭಾಜಪ ವತಿಯಿಂದ ವಿವಿಧ ಸಮಾಜಮುಖಿ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಾಧ್ಯಮ ಸಹ ವಕ್ತಾರ ಬಸವರಾಜು ತಿಳಿಸಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷ ವೆಂಕಟೇಗೌಡ ಮಾತನಾಡಿ, ಸೆ.17ರಿಂದ ಅ.2 ರ ಅವಧಿಯಲ್ಲಿ ಈ ದೇಶ ಕಂಡ ಅಪರೂಪದ ಮಹನೀಯರಾದ ಪ್ರಧಾನಿ ನರೇಂದ್ರ ಮೋದಿ, ದೀನ್ ದಯಾಳ್ ಉಪಾಧ್ಯಾಯ, ಲಾಲ್ ಬಹುದ್ದೂರ್ ಶಾಸ್ತ್ರಿ, ಮಹಾತ್ಮ ಗಾಂಧಿಯವರ ಜನ್ಮದಿನಾಚರಣೆಗಳು ಬರಲಿವೆ. ಇಂತಹ ಸುದಿನಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಹನೂರು ಭಾಜಪ ಕಾರ್ಯಾಲಯದಲ್ಲಿ ರಕ್ತದಾನ ಶಿಬಿರ, ಒಬಿಸಿ ಮೋರ್ಚಾ ವತಿಯಿಂದ ಬಿ. ವೆಂಕಟೇಶ್ ಅವರ ನೇತೃತ್ವದಲ್ಲಿ ಬೃಹತ್ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಇದೇ ರೀತಿ 15 ದಿನಗಳವರೆಗೆ ಅನೇಕ ಜನಪರ ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಈ ದಿನಗಳು ಬಿಜೆಪಿ ಕಾರ್ಯಕರ್ತರಿಗೆ ಹಬ್ಬದ ವಾತಾವರಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟರಾಜು( ರಣಧೀರ) ಹನೂರು ತಾಲೂಕು ಮಾಧ್ಯಮ ಸಂಚಾಲಕ ಮಧು, ಸಹ ವಕ್ತಾರ ಶಿವಕುಮಾರ್ ಉಪಸ್ಥಿತರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…