ಹನೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಡಾ ಅವರ ಸೂಚನೆಯಂತೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಸೆ.17 ರಿಂದ ಮಹಾತ್ಮ ಗಾಂಧಿ ಜಯಂತಿ ಅ.2ರವರೆಗೆ ಭಾಜಪ ವತಿಯಿಂದ ವಿವಿಧ ಸಮಾಜಮುಖಿ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಾಧ್ಯಮ ಸಹ ವಕ್ತಾರ ಬಸವರಾಜು ತಿಳಿಸಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷ ವೆಂಕಟೇಗೌಡ ಮಾತನಾಡಿ, ಸೆ.17ರಿಂದ ಅ.2 ರ ಅವಧಿಯಲ್ಲಿ ಈ ದೇಶ ಕಂಡ ಅಪರೂಪದ ಮಹನೀಯರಾದ ಪ್ರಧಾನಿ ನರೇಂದ್ರ ಮೋದಿ, ದೀನ್ ದಯಾಳ್ ಉಪಾಧ್ಯಾಯ, ಲಾಲ್ ಬಹುದ್ದೂರ್ ಶಾಸ್ತ್ರಿ, ಮಹಾತ್ಮ ಗಾಂಧಿಯವರ ಜನ್ಮದಿನಾಚರಣೆಗಳು ಬರಲಿವೆ. ಇಂತಹ ಸುದಿನಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಹನೂರು ಭಾಜಪ ಕಾರ್ಯಾಲಯದಲ್ಲಿ ರಕ್ತದಾನ ಶಿಬಿರ, ಒಬಿಸಿ ಮೋರ್ಚಾ ವತಿಯಿಂದ ಬಿ. ವೆಂಕಟೇಶ್ ಅವರ ನೇತೃತ್ವದಲ್ಲಿ ಬೃಹತ್ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಇದೇ ರೀತಿ 15 ದಿನಗಳವರೆಗೆ ಅನೇಕ ಜನಪರ ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಈ ದಿನಗಳು ಬಿಜೆಪಿ ಕಾರ್ಯಕರ್ತರಿಗೆ ಹಬ್ಬದ ವಾತಾವರಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟರಾಜು( ರಣಧೀರ) ಹನೂರು ತಾಲೂಕು ಮಾಧ್ಯಮ ಸಂಚಾಲಕ ಮಧು, ಸಹ ವಕ್ತಾರ ಶಿವಕುಮಾರ್ ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…
ಬೆಂಗಳೂರು: ಬಿಗ್ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…