ಜಿಲ್ಲೆಗಳು

ಹನೂರು : ಮೋದಿ ಜನ್ಮದಿನ ಸೆ.17 ರಿಂದ ಗಾಂಧಿ ಜಯಂತಿವರೆಗೆ ವಿವಿಧ ಕಾರ್ಯಕ್ರಮ

ಹನೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಡಾ ಅವರ ಸೂಚನೆಯಂತೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಸೆ.17 ರಿಂದ ಮಹಾತ್ಮ ಗಾಂಧಿ ಜಯಂತಿ ಅ.2ರವರೆಗೆ ಭಾಜಪ ವತಿಯಿಂದ ವಿವಿಧ ಸಮಾಜಮುಖಿ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಾಧ್ಯಮ ಸಹ ವಕ್ತಾರ ಬಸವರಾಜು ತಿಳಿಸಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬಿ.ಜೆ.ಪಿ ವಿವಿಧ ಮೋರ್ಚಾಗಳ ವತಿಯಿಂದ ರಕ್ತದಾನ ಶಿಬಿರ, ವಿಶ್ವ ಕ್ಷಯ ರೋಗ ನಿರ್ಮೂಲನೆ ಸಂಬಂಧಿತ ಕಾರ್ಯಕ್ರಮ, ಸಸಿ ನೆಡುವ ಕಾರ್ಯಕ್ರಮ, ಸ್ವಚ್ಛತಾ ಅಭಿಯಾನ, ಕಮಲೊತ್ಸವ, ಪಂಡಿತ್ ದೀನ್ ದಯಾಳ್ ಜಿ ರವರ ಕುರಿತು ಚರ್ಚೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಸ್ವದೇಶಿ ಖಾದಿ ಆತ್ಮ ನಿರ್ಭರತೆ ಸರಳತೆ ಮತ್ತು ಶುಚಿತ್ವದ ಕುರಿತು ಅಭಿಯಾನ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷ ವೆಂಕಟೇಗೌಡ ಮಾತನಾಡಿ, ಸೆ.17ರಿಂದ ಅ.2 ರ ಅವಧಿಯಲ್ಲಿ ಈ ದೇಶ ಕಂಡ ಅಪರೂಪದ ಮಹನೀಯರಾದ ಪ್ರಧಾನಿ ನರೇಂದ್ರ ಮೋದಿ, ದೀನ್ ದಯಾಳ್ ಉಪಾಧ್ಯಾಯ, ಲಾಲ್ ಬಹುದ್ದೂರ್ ಶಾಸ್ತ್ರಿ, ಮಹಾತ್ಮ ಗಾಂಧಿಯವರ ಜನ್ಮದಿನಾಚರಣೆಗಳು ಬರಲಿವೆ. ಇಂತಹ ಸುದಿನಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಹನೂರು ಭಾಜಪ ಕಾರ್ಯಾಲಯದಲ್ಲಿ ರಕ್ತದಾನ ಶಿಬಿರ, ಒಬಿಸಿ ಮೋರ್ಚಾ ವತಿಯಿಂದ ಬಿ. ವೆಂಕಟೇಶ್ ಅವರ ನೇತೃತ್ವದಲ್ಲಿ ಬೃಹತ್ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಇದೇ ರೀತಿ 15 ದಿನಗಳವರೆಗೆ ಅನೇಕ ಜನಪರ ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಈ ದಿನಗಳು ಬಿಜೆಪಿ ಕಾರ್ಯಕರ್ತರಿಗೆ ಹಬ್ಬದ ವಾತಾವರಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟರಾಜು( ರಣಧೀರ) ಹನೂರು ತಾಲೂಕು ಮಾಧ್ಯಮ ಸಂಚಾಲಕ ಮಧು, ಸಹ ವಕ್ತಾರ ಶಿವಕುಮಾರ್ ಉಪಸ್ಥಿತರಿದ್ದರು.

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

13 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

13 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

13 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

14 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

14 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

23 hours ago