Mysore
25
overcast clouds

Social Media

ಸೋಮವಾರ, 11 ಮೇ 2026
Light
Dark

ಹನೂರು : ಮೃತ್ತಿಕಾ ಸಂಗ್ರಹ ಅಭಿಯಾನ

ಹನೂರು : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣದ ಪ್ರಯುಕ್ತ ನಾಡಿದಾದ್ಯಂತ ಮೃತ್ತಿಕಾ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಇಒ ಶ್ರೀನಿವಾಸ್ ತಿಳಿಸಿದರು.

ತಾಲ್ಲೂಕಿನ ಬೈಲೂರು, ಪಿ ಜಿ ಪಾಳ್ಯ, ಹುತ್ತೂರು, ಲೊಕ್ಕನಹಳ್ಳಿ, ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮೃತ್ತಿಕಾ ಸಂಗ್ರಹ ಅಭಿಯಾನ ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು .

ಬೆಂಗಳೂರಿನ ವಿಮಾನ ನಿಲ್ದಾಣದ ಬಳಿ ನಿರ್ಮಿಸಿರುವ ಕೆಂಪೇಗೌಡರ ಪ್ರತಿಮೆಯನ್ನು ನವೆಂಬರ್ 11 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ರವರು ಉದ್ಘಾಟಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಕೆಂಪೇಗೌಡರ ರಥ ತಾಲ್ಲೂಕಿನ ಎಲ್ಲಾ ಪಂಚಾಯಿತಿಗಳಲ್ಲಿ 2ದಿನಗಳ ಮೃತ್ತಿಕಾ(ಮಣ್ಣು ) ಸಂಗ್ರಹಿಸಲಾಗುತ್ತಿದೆ ಇದಕ್ಕಾಗಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಪ್ರಮುಖ ಜಾಗವನ್ನು ಗುರುತಿಸಲಾಗಿದೆ.ರಥವು ಆ ನಿಗದಿತ ಸ್ಥಳಕ್ಕೆ ಬಂದು ನಿಲ್ಲುತ್ತದೆ ಎಂದು ತಿಳಿಸಿದರು.
ಲೊಕ್ಕನಹಳ್ಳಿ ಹೋಬಳಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಮಹಿಳೆಯರು ಪೂರ್ಣಕುಂಭ ಕೋರುವ ಮೂಲಕ ಕೆಂಪೇಗೌಡ ರಥಕ್ಕೆ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಪಿಡಿಒಗಳಾದ ರಾಜು, ಕುರುಬರ, ಸಿದ್ಧಪ್ಪ,ರಘುನಾಥ್ ಸೇರಿದಂತೆ ಗ್ರಾಮಸ್ಥರು ಅಧಿಕಾರಿ ವರ್ಗದವರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!