ಜಿಲ್ಲೆಗಳು

ಹನೂರು ಪತ್ರಕರ್ತರ ಭವನಕ್ಕೆ ಅನುದಾನ: ಸೋಮಣ್ಣ ಭರವಸೆ

ಹನೂರು: ನೂತನ ತಾಲ್ಲೂಕು ಕೇಂದ್ರದಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಚಾರ ಎಂದು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ ಅವರು ಪತ್ರಕರ್ತರು ಸಮಾಜದ ನಾಲ್ಕನೇ ಪ್ರಮುಖ ಅಂಗ,ಸಮಾಜದಲ್ಲಿನ ಅಂಕುಡೊಂಕು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾದುದು. ಚಾ. ನಗರ ಜಿಲ್ಲಾ ಕೇಂದ್ರ ಹೊರತುಪಡಿಸಿ ಯಾವುದೇ ತಾಲ್ಲೂಕು ಕೇಂದ್ರಗಳಲ್ಲಿ ಪತ್ರಕರ್ತರ ಭವನ ಇರಲಿಲ್ಲ, ನೂತನ ಹನೂರು ತಾಲೂಕಿನಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡಿಕೊಳ್ಳುತ್ತಿರುವುದು ಸಂತಸದ ವಿಚಾರ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರ ಜೊತೆ ಚರ್ಚೆ ನಡೆಸಿ ಆದಷ್ಟು ಬೇಗ ಭವನ ಕಾಮಗಾರಿಗೆ ಅನುದಾನ ಕೊಡಿಸಲು ಪ್ರಯತ್ನಿಸುತ್ತೇನೆ. ಇದಲ್ಲದೆ ವೈಯಕ್ತಿಕವಾಗಿ ಭವನ ನಿರ್ಮಾಣಕ್ಕೆ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ) ಹನೂರು ತಾಲ್ಲೂಕು ವತಿಯಿಂದ ಸಚಿವ ವಿ. ಸೋಮಣ್ಣ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ದೇವರಾಜ್ ನಾಯ್ಡು, ಅಧ್ಯಕ್ಷ ಮಹಾದೇಶ್ ಎಂ ಹಾಗೂ ಪದಾಧಿಕಾರಿಗಳು ಹಾಜರಿದ್ದರು

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago