ಹನೂರು: ಸುಮಾರು 30 ವರ್ಷಗಳಿಂದ ಕೆರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅಂಗಡಿ ಮಳಿಗೆ ನಿರ್ಮಿಸಿ ವ್ಯಾಪಾರ ಮಾಡುತ್ತಿದ್ದ ಮಳಿಗೆಗಳನ್ನು ತಾಲೂಕು ಆಡಳಿತ ಸಮ್ಮುಖದಲ್ಲಿ ಇಂದು ತೆರವುಗೊಳಿಸಲಾಯಿತು.
ಕೆರೆ ಒತ್ತುವರಿಯಾಗಿರುವ ಬಗ್ಗೆ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಹಲವಾರು ಬಾರಿ ವರದಿಯಾಗಿತ್ತು. ಇದಲ್ಲದೆ ಸ್ಥಳೀಯರು ಜಿಲ್ಲಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರಿಗೆ ಕೆರೆ ಒತ್ತುವರಿ ಮಾಡುವಂತೆ ಮನವಿ ಸಲ್ಲಿಸಿದ್ದರು, ಈ ಹಿನ್ನೆಲೆ ಕೆರೆ ಒತ್ತುವರಿ ತೆರವುಗೊಳಿಸಲಾಗಿದೆ.
ಹುತ್ತೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಗಿರಿಜಾ ಶೇಖರ್ ಮಾತನಾಡಿ ಗ್ರಾಮ ಪಂಚಾಯಿತಿ ವತಿಯಿಂದ ಕೆರೆ ಅಭಿವೃದ್ಧಿ ಮಾಡಲು ಈಗಾಗಲೇ ಯೋಜನೆ ಸಿದ್ದವಾಗಿದ್ದು,
ಕೆರೆ ಹೊತ್ತುವರಿ ತೆರವು ಕಾರ್ಯ ಪೂರ್ಣಗೊಂಡ ತಕ್ಷಣವೇ ಕೆರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಒತ್ತುವರಿ ತೆರವು ಕಾರ್ಯದಲ್ಲಿ ತಹಶಿಲ್ದಾರ್ ಆನಂದಯ್ಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಹಾಜರಿದ್ದರು.
ವೃತ ನಿರೀಕ್ಷಕ ಸಂತೋಷ್ ಕಶ್ಯಪ್ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು ಈ ಸಂದರ್ಭದಲ್ಲಿ ಹುತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಪಾಧ್ಯಕ್ಷ ಪುಷ್ಪಲತಾ ಬಸವರಾಜು ಸದಸ್ಯರಾದ ಪುಟ್ಟ ವೀರ ನಾಯಕ, ಮೇಘ ಮಧು, ಹೆಚ್ ಮಹದೇವಸ್ವಾಮಿ, ಶೇಖರ್, ಮಂಗಳಮ್ಮ, ಪಿ ಡಿ ಓ ಕಾಸವ್ವ ಅಜ್ಜಪ್ಪ ಕುರುಬರ ಹಾಗೂ ಸಾರ್ವಜನಿಕರು ಹಾಜರಿದ್ದರು.
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…
ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…