ಜಿಲ್ಲೆಗಳು

ಹನೂರು : ಒಡೆಯರ್ ಪಾಳ್ಯ ಕೆರೆ ಒತ್ತುವರಿ ತೆರವು

ಹನೂರು: ಸುಮಾರು 30 ವರ್ಷಗಳಿಂದ ಕೆರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅಂಗಡಿ ಮಳಿಗೆ ನಿರ್ಮಿಸಿ ವ್ಯಾಪಾರ ಮಾಡುತ್ತಿದ್ದ ಮಳಿಗೆಗಳನ್ನು ತಾಲೂಕು ಆಡಳಿತ ಸಮ್ಮುಖದಲ್ಲಿ ಇಂದು ತೆರವುಗೊಳಿಸಲಾಯಿತು.

ಕೆರೆ ಒತ್ತುವರಿಯಾಗಿರುವ ಬಗ್ಗೆ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಹಲವಾರು ಬಾರಿ ವರದಿಯಾಗಿತ್ತು. ಇದಲ್ಲದೆ ಸ್ಥಳೀಯರು ಜಿಲ್ಲಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರಿಗೆ ಕೆರೆ ಒತ್ತುವರಿ ಮಾಡುವಂತೆ ಮನವಿ ಸಲ್ಲಿಸಿದ್ದರು, ಈ ಹಿನ್ನೆಲೆ ಕೆರೆ ಒತ್ತುವರಿ ತೆರವುಗೊಳಿಸಲಾಗಿದೆ.

ಹುತ್ತೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಗಿರಿಜಾ ಶೇಖರ್ ಮಾತನಾಡಿ ಗ್ರಾಮ ಪಂಚಾಯಿತಿ ವತಿಯಿಂದ ಕೆರೆ ಅಭಿವೃದ್ಧಿ ಮಾಡಲು ಈಗಾಗಲೇ ಯೋಜನೆ ಸಿದ್ದವಾಗಿದ್ದು,
ಕೆರೆ ಹೊತ್ತುವರಿ ತೆರವು ಕಾರ್ಯ ಪೂರ್ಣಗೊಂಡ ತಕ್ಷಣವೇ ಕೆರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಒತ್ತುವರಿ ತೆರವು ಕಾರ್ಯದಲ್ಲಿ ತಹಶಿಲ್ದಾರ್ ಆನಂದಯ್ಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಹಾಜರಿದ್ದರು.

ವೃತ ನಿರೀಕ್ಷಕ ಸಂತೋಷ್ ಕಶ್ಯಪ್ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು  ಈ ಸಂದರ್ಭದಲ್ಲಿ ಹುತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಪಾಧ್ಯಕ್ಷ ಪುಷ್ಪಲತಾ ಬಸವರಾಜು ಸದಸ್ಯರಾದ ಪುಟ್ಟ ವೀರ ನಾಯಕ, ಮೇಘ ಮಧು, ಹೆಚ್ ಮಹದೇವಸ್ವಾಮಿ, ಶೇಖರ್, ಮಂಗಳಮ್ಮ, ಪಿ ಡಿ ಓ ಕಾಸವ್ವ ಅಜ್ಜಪ್ಪ ಕುರುಬರ ಹಾಗೂ ಸಾರ್ವಜನಿಕರು ಹಾಜರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

43 mins ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

3 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

3 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

18 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

18 hours ago