ಜಿಲ್ಲೆಗಳು

ಹನೂರು : ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಪಟ್ಟಣ ಪಂಚಾಯಿತಿ ವಿಫಲ

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ಆಡಳಿತ ವಿಫಲವಾಗಿದೆ ಎಂದು 13ನೇ ವಾರ್ಡಿನ ಜೆಡಿಎಸ್ ಸದಸ್ಯ ಮಹೇಶ್ ಆರೋಪಿಸಿದ್ದಾರೆ.

ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದ ಅವರು ಪಟ್ಟಣ ವ್ಯಾಪ್ತಿಯ 13 ವಾರ್ಡ್ ಗಳಿಗೆ ಸಮರ್ಪಕವಾಗಿ ಕಾವೇರಿ ಕುಡಿಯುವ ನೀರು, ಬೀದಿದೀಪ, ರಸ್ತೆ, ಚರಂಡಿ ಸ್ವಚ್ಛಗೊಳಿಸುವುದು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಆಡಳಿತ ವಿಫಲವಾಗಿದೆ.ಈ ಬಗ್ಗೆ ಹಲವು ಬಾರಿ ಅಧ್ಯಕ್ಷರು,ಉಪಾಧ್ಯಕ್ಷರು ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೂ ಸಹ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಇದರಿಂದ ವಾರ್ಡ್ ಗಳಲ್ಲಿ ನಮಗೆ ಮತ ನೀಡಿದವರಿಗೆ ಉತ್ತರಿಸಲು ಸಾಧ್ಯವಾಗದೆ ಅಸಹಾಯಕರಾಗಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2019-20ರಿಂದ 24.10%,7.25% ‘ 5%ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿರುವುದಿಲ್ಲ, ಅಧ್ಯಕ್ಷರು ಸಾಮಾನ್ಯ ಸಭೆ ಹೊರತುಪಡಿಸಿ 1ದಿನವಾದರೂ ಕಚೇರಿಗೆ ಬರುತ್ತಿಲ್ಲ, ಉಪಾಧ್ಯಕ್ಷರು ಕಚೇರಿಗೆ ಬಂದರೂ ಸಹ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುತ್ತಿಲ್ಲ
ಸಮಸ್ಯೆಗಳ ಬಗ್ಗೆ ಮುಖ್ಯಾಧಿಕಾರಿಗಳ ಗಮನಕ್ಕೂ ತಂದರೂ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ಪಟ್ಟಣ ಪಂಚಾಯಿತಿ ಸದಸ್ಯರುಗಳು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿ ಕುಂಠಿತ: ಪಟ್ಟಣ ಪಂಚಾಯಿತಿ ಆದಾಯ ಮೂಲಗಳಾದ ಉದ್ದಿಮೆ ಪರವಾನಿಗೆ ,ನೀರಿನ ಕಂದಾಯ ಕಟ್ಟಡಗಳ ತೆರಿಗೆ ಹಾಗೂ ಮಳಿಗೆಗಳಿಂದ ಸರಿಯಾದ ರೀತಿ ಬಾಡಿಗೆ ವಸೂಲಾತಿ ಮಾಡದ ಹಿನ್ನೆಲೆ ಪಟ್ಟಣದ ಅಭಿವೃದ್ಧಿ ಕುಂಠಿತವಾಗಿದೆ. ಸಾಮಾನ್ಯ ಸಭೆಗಳಲ್ಲಿ ಹಲವು ಬಾರಿ ಅಧ್ಯಕ್ಷರ ಗಮನಕ್ಕೆ ತಂದರು ಸೌಜನ್ಯಕ್ಕೂ ಅಧಿಕಾರಿಗಳ ಜತೆ ಚರ್ಚಿಸಿಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕಚೇರಿಯಲ್ಲಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಜೆಡಿಎಸ್ ಸದಸ್ಯರುಗಳಾದ ಮಹೇಶ್, ಮಹೇಶ್ ನಾಯ್ಕ, ಮುಮ್ತಾಜ್ ಬಾನು, ಆನಂದ್ ಕುಮಾರ್,ಪವಿತ್ರ,ಮಂಜುಳಾ ಬಿಜೆಪಿ ಸದಸ್ಯೆ ರೂಪಾ ಪಾಲ್ಗೊಂಡಿದ್ದರು .

andolanait

Recent Posts

ನಾನೇ ವಿಪಕ್ಷ ನಾಯಕ ಎಂದ ಯತ್ನಾಳ್

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…

7 mins ago

ಬಿಳಿಗಿರಿ ರಂಗನಬೆಟ್ಟ ಅಭಿವೃದ್ಧಿ ಕಾರ್ಯ ಪರಿಶೀಲನೆಯಲ್ಲಿದೆ : ಸಚಿವ .ಎಚ್.ಕೆ.ಪಾಟೀಲ್‌

ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…

21 mins ago

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

1 hour ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

2 hours ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

2 hours ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

2 hours ago