ಜಿಲ್ಲೆಗಳು

ಹನೂರು : ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಪಟ್ಟಣ ಪಂಚಾಯಿತಿ ವಿಫಲ

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ಆಡಳಿತ ವಿಫಲವಾಗಿದೆ ಎಂದು 13ನೇ ವಾರ್ಡಿನ ಜೆಡಿಎಸ್ ಸದಸ್ಯ ಮಹೇಶ್ ಆರೋಪಿಸಿದ್ದಾರೆ.

ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದ ಅವರು ಪಟ್ಟಣ ವ್ಯಾಪ್ತಿಯ 13 ವಾರ್ಡ್ ಗಳಿಗೆ ಸಮರ್ಪಕವಾಗಿ ಕಾವೇರಿ ಕುಡಿಯುವ ನೀರು, ಬೀದಿದೀಪ, ರಸ್ತೆ, ಚರಂಡಿ ಸ್ವಚ್ಛಗೊಳಿಸುವುದು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಆಡಳಿತ ವಿಫಲವಾಗಿದೆ.ಈ ಬಗ್ಗೆ ಹಲವು ಬಾರಿ ಅಧ್ಯಕ್ಷರು,ಉಪಾಧ್ಯಕ್ಷರು ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೂ ಸಹ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಇದರಿಂದ ವಾರ್ಡ್ ಗಳಲ್ಲಿ ನಮಗೆ ಮತ ನೀಡಿದವರಿಗೆ ಉತ್ತರಿಸಲು ಸಾಧ್ಯವಾಗದೆ ಅಸಹಾಯಕರಾಗಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2019-20ರಿಂದ 24.10%,7.25% ‘ 5%ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿರುವುದಿಲ್ಲ, ಅಧ್ಯಕ್ಷರು ಸಾಮಾನ್ಯ ಸಭೆ ಹೊರತುಪಡಿಸಿ 1ದಿನವಾದರೂ ಕಚೇರಿಗೆ ಬರುತ್ತಿಲ್ಲ, ಉಪಾಧ್ಯಕ್ಷರು ಕಚೇರಿಗೆ ಬಂದರೂ ಸಹ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುತ್ತಿಲ್ಲ
ಸಮಸ್ಯೆಗಳ ಬಗ್ಗೆ ಮುಖ್ಯಾಧಿಕಾರಿಗಳ ಗಮನಕ್ಕೂ ತಂದರೂ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ಪಟ್ಟಣ ಪಂಚಾಯಿತಿ ಸದಸ್ಯರುಗಳು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿ ಕುಂಠಿತ: ಪಟ್ಟಣ ಪಂಚಾಯಿತಿ ಆದಾಯ ಮೂಲಗಳಾದ ಉದ್ದಿಮೆ ಪರವಾನಿಗೆ ,ನೀರಿನ ಕಂದಾಯ ಕಟ್ಟಡಗಳ ತೆರಿಗೆ ಹಾಗೂ ಮಳಿಗೆಗಳಿಂದ ಸರಿಯಾದ ರೀತಿ ಬಾಡಿಗೆ ವಸೂಲಾತಿ ಮಾಡದ ಹಿನ್ನೆಲೆ ಪಟ್ಟಣದ ಅಭಿವೃದ್ಧಿ ಕುಂಠಿತವಾಗಿದೆ. ಸಾಮಾನ್ಯ ಸಭೆಗಳಲ್ಲಿ ಹಲವು ಬಾರಿ ಅಧ್ಯಕ್ಷರ ಗಮನಕ್ಕೆ ತಂದರು ಸೌಜನ್ಯಕ್ಕೂ ಅಧಿಕಾರಿಗಳ ಜತೆ ಚರ್ಚಿಸಿಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕಚೇರಿಯಲ್ಲಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಜೆಡಿಎಸ್ ಸದಸ್ಯರುಗಳಾದ ಮಹೇಶ್, ಮಹೇಶ್ ನಾಯ್ಕ, ಮುಮ್ತಾಜ್ ಬಾನು, ಆನಂದ್ ಕುಮಾರ್,ಪವಿತ್ರ,ಮಂಜುಳಾ ಬಿಜೆಪಿ ಸದಸ್ಯೆ ರೂಪಾ ಪಾಲ್ಗೊಂಡಿದ್ದರು .

andolanait

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

38 mins ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

47 mins ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

53 mins ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

59 mins ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

10 hours ago