ಜಿಲ್ಲೆಗಳು

ಹನೂರು : ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಪಟ್ಟಣ ಪಂಚಾಯಿತಿ ವಿಫಲ

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ಆಡಳಿತ ವಿಫಲವಾಗಿದೆ ಎಂದು 13ನೇ ವಾರ್ಡಿನ ಜೆಡಿಎಸ್ ಸದಸ್ಯ ಮಹೇಶ್ ಆರೋಪಿಸಿದ್ದಾರೆ.

ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದ ಅವರು ಪಟ್ಟಣ ವ್ಯಾಪ್ತಿಯ 13 ವಾರ್ಡ್ ಗಳಿಗೆ ಸಮರ್ಪಕವಾಗಿ ಕಾವೇರಿ ಕುಡಿಯುವ ನೀರು, ಬೀದಿದೀಪ, ರಸ್ತೆ, ಚರಂಡಿ ಸ್ವಚ್ಛಗೊಳಿಸುವುದು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಆಡಳಿತ ವಿಫಲವಾಗಿದೆ.ಈ ಬಗ್ಗೆ ಹಲವು ಬಾರಿ ಅಧ್ಯಕ್ಷರು,ಉಪಾಧ್ಯಕ್ಷರು ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೂ ಸಹ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಇದರಿಂದ ವಾರ್ಡ್ ಗಳಲ್ಲಿ ನಮಗೆ ಮತ ನೀಡಿದವರಿಗೆ ಉತ್ತರಿಸಲು ಸಾಧ್ಯವಾಗದೆ ಅಸಹಾಯಕರಾಗಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2019-20ರಿಂದ 24.10%,7.25% ‘ 5%ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿರುವುದಿಲ್ಲ, ಅಧ್ಯಕ್ಷರು ಸಾಮಾನ್ಯ ಸಭೆ ಹೊರತುಪಡಿಸಿ 1ದಿನವಾದರೂ ಕಚೇರಿಗೆ ಬರುತ್ತಿಲ್ಲ, ಉಪಾಧ್ಯಕ್ಷರು ಕಚೇರಿಗೆ ಬಂದರೂ ಸಹ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುತ್ತಿಲ್ಲ
ಸಮಸ್ಯೆಗಳ ಬಗ್ಗೆ ಮುಖ್ಯಾಧಿಕಾರಿಗಳ ಗಮನಕ್ಕೂ ತಂದರೂ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ಪಟ್ಟಣ ಪಂಚಾಯಿತಿ ಸದಸ್ಯರುಗಳು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿ ಕುಂಠಿತ: ಪಟ್ಟಣ ಪಂಚಾಯಿತಿ ಆದಾಯ ಮೂಲಗಳಾದ ಉದ್ದಿಮೆ ಪರವಾನಿಗೆ ,ನೀರಿನ ಕಂದಾಯ ಕಟ್ಟಡಗಳ ತೆರಿಗೆ ಹಾಗೂ ಮಳಿಗೆಗಳಿಂದ ಸರಿಯಾದ ರೀತಿ ಬಾಡಿಗೆ ವಸೂಲಾತಿ ಮಾಡದ ಹಿನ್ನೆಲೆ ಪಟ್ಟಣದ ಅಭಿವೃದ್ಧಿ ಕುಂಠಿತವಾಗಿದೆ. ಸಾಮಾನ್ಯ ಸಭೆಗಳಲ್ಲಿ ಹಲವು ಬಾರಿ ಅಧ್ಯಕ್ಷರ ಗಮನಕ್ಕೆ ತಂದರು ಸೌಜನ್ಯಕ್ಕೂ ಅಧಿಕಾರಿಗಳ ಜತೆ ಚರ್ಚಿಸಿಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕಚೇರಿಯಲ್ಲಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಜೆಡಿಎಸ್ ಸದಸ್ಯರುಗಳಾದ ಮಹೇಶ್, ಮಹೇಶ್ ನಾಯ್ಕ, ಮುಮ್ತಾಜ್ ಬಾನು, ಆನಂದ್ ಕುಮಾರ್,ಪವಿತ್ರ,ಮಂಜುಳಾ ಬಿಜೆಪಿ ಸದಸ್ಯೆ ರೂಪಾ ಪಾಲ್ಗೊಂಡಿದ್ದರು .

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

5 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

11 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

11 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

12 hours ago