ಜಿಲ್ಲೆಗಳು

ಹನೂರು : ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೂರ್ತಿರವರು ಅಧಿಕಾರ ಸ್ವೀಕಾರ

ಹನೂರು : ಪಟ್ಟಣದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಮೂರ್ತಿರವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪರಶಿವಯ್ಯ ರವರನ್ನು ಕೊಳ್ಳೇಗಾಲ ನಗರಸಭೆ ಸಮುದಾಯ ಸಂಘಟನಾಧಿಕಾರಿ ಯಾಗಿ ವರ್ಗ ಮಾಡಲಾಗಿದ್ದು ,ಸ್ಥಳ ನಿರೀಕ್ಷಣೆಯಲ್ಲಿದ್ದ ಮೂರ್ತಿ ರವರನ್ನು ಹನೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಯನ್ನಾಗಿ ವರ್ಗಾವಣೆಗೊಳಿಸಲಾಗಿದೆ.

ಹೈಕೋರ್ಟ್ ಆದೇಶ ಮಾಡಿದ 2 ತಿಂಗಳ ನಂತರ ಕರ್ತವ್ಯಕ್ಕೆ ಅವಕಾಶ : ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮೂರ್ತಿ ರವರಿಗೆ ಹುದ್ದೆ ತೋರಿಸದೆ 2021ರ ಡಿಸೆಂಬರ್ ನಲ್ಲಿ ವರ್ಗಾವಣೆ ಮಾಡಲಾಗಿತ್ತು ಇವರ ಜಾಗಕ್ಕೆ ಪರಶಿವಯ್ಯ ಎಂಬುವವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು .ಈ ಹಿನ್ನೆಲೆ ಮುಖ್ಯಾಧಿಕಾರಿ ಮೂರ್ತಿರವರು ಹೈಕೋರ್ಟ್ ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು.ತಕರಾರು ಅರ್ಜಿಯನ್ನು ಮಾನ್ಯ ಮಾಡಿ 2022 ಆಗಸ್ಟ್ 18ರಂದು ಹೈಕೋರ್ಟ್ ವಿಭಾಗೀಯ ಪೀಠ ಮುಖ್ಯ ನ್ಯಾಯಾಧೀಶರಾದ ಸುನೀಲ್ ದತ್ ಯಾದವ್ ರವರು ಸರ್ಕಾರದ ಆದೇಶವನ್ನು ರದ್ದು ಮಾಡಿ ಅರ್ಜಿದಾರರನ್ನು ಮೂಲ ಹುದ್ದೆಗೆ ನಿಯೋಜಿಸಿ ಆದೇಶ ಹೊರಡಿಸಲಾಗಿತ್ತು.ಹೈಕೋರ್ಟ್ ಆದೇಶದಂತೆ ಹೈಕೋರ್ಟ್ ಆದೇಶ ಪ್ರತಿ ಹಾಗೂ ಮುಖ್ಯಾಧಿಕಾರಿ ಹುದ್ದೆಗೆ ಮುಂದುವರೆಯಲು ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದ್ದರು. ಇದಾದ 2ತಿಂಗಳುಗಳ ಬಳಿಕ ಮೂರ್ತಿ ರವರಿಗೆ ಜಿಲ್ಲಾಧಿಕಾರಿಗಳು ಹನೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಮೂರ್ತಿ ರವರನ್ನು ವರ್ಗಾಯಿಸಿದ್ದಾರೆ

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

10 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago