ಹನೂರು : ಪಟ್ಟಣದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಮೂರ್ತಿರವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.
ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪರಶಿವಯ್ಯ ರವರನ್ನು ಕೊಳ್ಳೇಗಾಲ ನಗರಸಭೆ ಸಮುದಾಯ ಸಂಘಟನಾಧಿಕಾರಿ ಯಾಗಿ ವರ್ಗ ಮಾಡಲಾಗಿದ್ದು ,ಸ್ಥಳ ನಿರೀಕ್ಷಣೆಯಲ್ಲಿದ್ದ ಮೂರ್ತಿ ರವರನ್ನು ಹನೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಯನ್ನಾಗಿ ವರ್ಗಾವಣೆಗೊಳಿಸಲಾಗಿದೆ.
ಹೈಕೋರ್ಟ್ ಆದೇಶ ಮಾಡಿದ 2 ತಿಂಗಳ ನಂತರ ಕರ್ತವ್ಯಕ್ಕೆ ಅವಕಾಶ : ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮೂರ್ತಿ ರವರಿಗೆ ಹುದ್ದೆ ತೋರಿಸದೆ 2021ರ ಡಿಸೆಂಬರ್ ನಲ್ಲಿ ವರ್ಗಾವಣೆ ಮಾಡಲಾಗಿತ್ತು ಇವರ ಜಾಗಕ್ಕೆ ಪರಶಿವಯ್ಯ ಎಂಬುವವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು .ಈ ಹಿನ್ನೆಲೆ ಮುಖ್ಯಾಧಿಕಾರಿ ಮೂರ್ತಿರವರು ಹೈಕೋರ್ಟ್ ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು.ತಕರಾರು ಅರ್ಜಿಯನ್ನು ಮಾನ್ಯ ಮಾಡಿ 2022 ಆಗಸ್ಟ್ 18ರಂದು ಹೈಕೋರ್ಟ್ ವಿಭಾಗೀಯ ಪೀಠ ಮುಖ್ಯ ನ್ಯಾಯಾಧೀಶರಾದ ಸುನೀಲ್ ದತ್ ಯಾದವ್ ರವರು ಸರ್ಕಾರದ ಆದೇಶವನ್ನು ರದ್ದು ಮಾಡಿ ಅರ್ಜಿದಾರರನ್ನು ಮೂಲ ಹುದ್ದೆಗೆ ನಿಯೋಜಿಸಿ ಆದೇಶ ಹೊರಡಿಸಲಾಗಿತ್ತು.ಹೈಕೋರ್ಟ್ ಆದೇಶದಂತೆ ಹೈಕೋರ್ಟ್ ಆದೇಶ ಪ್ರತಿ ಹಾಗೂ ಮುಖ್ಯಾಧಿಕಾರಿ ಹುದ್ದೆಗೆ ಮುಂದುವರೆಯಲು ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದ್ದರು. ಇದಾದ 2ತಿಂಗಳುಗಳ ಬಳಿಕ ಮೂರ್ತಿ ರವರಿಗೆ ಜಿಲ್ಲಾಧಿಕಾರಿಗಳು ಹನೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಮೂರ್ತಿ ರವರನ್ನು ವರ್ಗಾಯಿಸಿದ್ದಾರೆ
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…