ಹನೂರು:ಮಂಗಳವಾರ ಸಿಡಿಲು ಬಡಿದು ಮೃತಪಟ್ಟಿದ್ದ ಮಿಣ್ಯಂ ಗ್ರಾಮದ ಮಾದಪ್ಪ ಅವರ ಕುಟುಂಬದವರಿಗೆ ಶಾಸಕ ಆರ್. ನರೇಂದ್ರ ಅವರು ಐದು ಲಕ್ಷ ರೂಗಳ ಚೆಕ್ ವಿತರಣೆ ಮಾಡಿದರು.
ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಂತ್ರಸ್ತ ಕುಟುಂಬದವರಿಗೆ ಐದು ಲಕ್ಷ ರೂ.ಗಳ ಚೆಕ್ ವಿತರಣೆ ಮಾಡಿ, ಮಾತನಾಡಿದ ಅವರು ಕಳೆದ ಮೂರು ದಿನಗಳ ಹಿಂದೆ ಮಿಣ್ಯಂ ಗ್ರಾಮದ ಮಾದಪ್ಪ ಹಾಗೂ ಅವರಿಗೆ ಸೇರಿದ 6 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದವು. ಈ ಬಗ್ಗೆ ಸರಕಾರಕ್ಕೆ ಪರಿಹಾರ ಕೋರಿ ಮನವಿ ಸಲ್ಲಿಸಲಾಗಿದ್ದ ಹಿನ್ನೆಲೆಯಲ್ಲಿ ಪರಿಹಾರವನ್ನು ವಿತರಿಸಲಾಗುತ್ತಿದೆ. ಜೊತೆಗೆ ಪಶು ಇಲಾಖೆಯಿಂದ ಕೂಡ 35 ಸಾವಿರ ರೂ.ಗಳ ಪರಿಹಾರ ಧನವನ್ನು ನೀಡಲಾಗುತ್ತಿದೆ. ಸಂತ್ರಸ್ತ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಆನಂದಯ್ಯ, ಗ್ರಾಮಲೆಕ್ಕಿಗ ಶರವಣ ಸೇರಿದಂತೆ ಸಂತ್ರಸ್ತ ಕುಟುಂಬಸ್ಥರು ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…